ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಹೋರಾಟಕ್ಕೂ ಮುನ್ನವೇ ಹೊರಬಿತ್ತು ಆದೇಶ…..ಬೇಡಿಕೆಗಳು ಈಡೇರಿಕೆ…..

Suddi Sante Desk
ರಾಜ್ಯದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಹೋರಾಟಕ್ಕೂ ಮುನ್ನವೇ ಹೊರಬಿತ್ತು ಆದೇಶ…..ಬೇಡಿಕೆಗಳು ಈಡೇರಿಕೆ…..

 

ಬೆಂಗಳೂರು

ರಾಜ್ಯದಲ್ಲಿನ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ ಹೌದು ರಾಜ್ಯದ ಲಕ್ಷಾಂತರ ಸಾರಿಗೆ ನೌಕರರ ಪಾಲಿಗೆ ಸರ್ಕಾರ ಮಹತ್ವದ ಸಿಹಿ ಸುದ್ದಿಯನ್ನು ನೀಡಿದೆ ಕಳೆದೆರಡು ವರ್ಷ ಗಳಿಂದ 38 ತಿಂಗಳಿಂದ ಬಾಕಿ ಉಳಿಸಿಕೊಂಡಿದ್ದ ವೇತನ ಹಿಂಬಾಕಿ (ಅರಿಯರ್ಸ್) ಹಾಗೂ ವೇತನ ಪರಿಷ್ಕರಣೆಗಾಗಿ ಆಗ್ರಹಿಸಿ ಸಾರಿಗೆ ಸಿಬ್ಬಂದಿ ನಡೆಸಲುದ್ದೇಶಿಸಿದ್ದ ಪ್ರತಿಭಟನೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.ನೌಕರರ ಪ್ರಮುಖ ಹಕ್ಕೊತ್ತಾಯಗಳಲ್ಲಿ ಒಂದಾದ 26 ತಿಂಗಳ ಹಿಂಬಾಕಿ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.

ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ (KSRTC, BMTC, NWKRTC, KKRTC) ನೌಕರರು ಒಟ್ಟು 38 ತಿಂಗಳ ವೇತನ ಹಿಂಬಾಕಿಯನ್ನು ನೀಡುವಂತೆ ಒತ್ತಾಯಿಸುತ್ತಿದ್ದರು ಈ ಬಗ್ಗೆ ಗಂಭೀರ ಚರ್ಚೆ ನಡೆಸಿದ ರಾಜ್ಯ ಸರ್ಕಾರ, ಆರ್ಥಿಕ ಇಲಾಖೆ ಯೊಂದಿಗೆ ಸಮಾಲೋಚನೆ ನಡೆಸಿ ಪ್ರಾಥಮಿಕ ಹಂತದಲ್ಲಿ 26 ತಿಂಗಳ ಅರಿಯರ್ಸ್ ನೀಡಲು ಅಧಿಕೃತ ಒಪ್ಪಿಗೆ ಸೂಚಿಸಿದೆ. ಅಂದರೆ, 1-1-2021 ರಿಂದ 28-03-2023 ರವರೆಗೆ 26 ತಿಂಗಳ ಹಿಂಬಾಕಿ ನೀಡಲು ಒಪ್ಪಿಗೆಯನ್ನು ಸೂಚಿಸಿದೆ. ಇದು ಸಾರಿಗೆ ನೌಕರರ ಸಂಘಟನೆಗಳ ನಿರಂತರ ಶ್ರಮಕ್ಕೆ ಸಂದ ಜಯವಾಗಿದೆ

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿ ಗಳೊಂದಿಗೆ ನಡೆಸಿದ ಸಭೆಯ ನಂತರ ಮತ್ತೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. 1ನೇ ಏಪ್ರಿಲ್ 2025 ರಿಂದ ಜಾರಿಗೆ ಬರುವಂತೆ ಸಾರಿಗೆ ನೌಕರರ ವೇತನವನ್ನು ಪರಿಷ್ಕರಣೆ ಮಾಡಲು ಸರ್ಕಾರ ಹಸಿರು ನಿಶಾನೆ ತೋರಿಸಿದೆ. ವೇತನದಲ್ಲಿ ಎಷ್ಟು ಪ್ರಮಾಣದ ಏರಿಕೆ ಮಾಡಬೇಕು ಎಂಬ ಬಗ್ಗೆ ಸಾರಿಗೆ ಸಂಘಟನೆ ಗಳ ಮುಖಂಡರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಫೆಬ್ರವರಿ 19 ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನೌಕರರು ಬೃಹತ್ ‘ಬೆಂಗಳೂರು ಚಲೋ’ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಬನಶಂಕರಿ ಡಿಪೋ ಸೇರಿದಂತೆ ನಗರದಾದ್ಯಂತ ಕರಪತ್ರಗಳನ್ನು ಹಂಚಿ, ಸೇವೆಯಲ್ಲಿ ವ್ಯತ್ಯಯ ಉಂಟುಮಾಡುವ ಎಚ್ಚರಿಕೆ ನೀಡಲಾಗಿತ್ತು. ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಧಕ್ಕೆಯಾಗಬಾರದು ಹಾಗೂ ನೌಕರರ ಹಿತರಕ್ಷಣೆ ಮಾಡಬೇಕು ಎಂಬ ದೃಷ್ಟಿಯಿಂದ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಈ ಐತಿಹಾಸಿಕ ತೀರ್ಮಾನ ಪ್ರಕಟಿಸಿದೆ

ಸಾರಿಗೆ ಸಚಿವರು ಇಂದು ತಡರಾತ್ರಿಯವರೆಗೂ ಸಂಘಟನೆಗ ಳೊಂದಿಗೆ ಸಭೆ ನಡೆಸಿ, ನೌಕರರ ಮನವೊಲಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಈ ನಿರ್ಧಾರದಿಂದಾಗಿ ನಾಳೆ ನಡೆಯಬೇಕಿದ್ದ ಸೇವೆಯ ವ್ಯತ್ಯಯದ ಆತಂಕ ದೂರವಾದಂತಾಗಿದೆ. ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ ನೌಕರರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಒಟ್ಟಾರೆಯಾಗಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ನೌಕರರ ಬೇಡಿಕೆಗಳನ್ನು ಈಡೇರಿಸುವತ್ತ ಸರ್ಕಾರ ದಾಪುಗಾಲು ಹಾಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.