ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ, ಕಾದು ನೋಡಿ: ಈಶ್ವರಪ್ಪ – ರಾಜಕೀಯ ದಲ್ಲಿ ಹೊಸ ಚರ್ಚೆ ತೀವ್ರ ಕುತೂಹಲ ಕೆರಳಿಸಿದೆ ಈ ಮಾತು…..

Suddi Sante Desk
ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ, ಕಾದು ನೋಡಿ: ಈಶ್ವರಪ್ಪ – ರಾಜಕೀಯ ದಲ್ಲಿ ಹೊಸ ಚರ್ಚೆ ತೀವ್ರ ಕುತೂಹಲ ಕೆರಳಿಸಿದೆ ಈ ಮಾತು…..

ಬೆಂಗಳೂರು

ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ, ಕಾದು ನೋಡಿ: ಈಶ್ವರಪ್ಪ ಹೌದು ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ. ಈ ದೇಶದಲ್ಲಿ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ.ಹೀಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮೂಲಕ ಬಿಎಲ್ ಸಂತೋಷ್ ಅವರಿಗೆ ಸವಾಲು ಹಾಕಿದ್ದು ಈ ವಿಚಾರವಾಗಿ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಕಾಂಗ್ರೆಸ್ ಗೆ ಒಂದು ತಿಂಗಳು ಸಮಯ ಕೊಡುತ್ತೇವೆ.ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ.

ಕಾಂಗ್ರೆಸ್ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.