This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

Sports News

ಶಾಲಾ ಕಾಲೇಜು ಬಹಿಷ್ಕಾರ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 21 ದಿನ ಗಡುವು…..

WhatsApp Group Join Now
Telegram Group Join Now

ಬೆಂಗಳೂರು –

ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ಮಾಡಲು ಷಡಾಲ್ಷರಿ ಅವರ ನೇತ್ರತ್ವದಲ್ಲಿ ಬೆಂಗಳೂರಿ ನಲ್ಲಿ ನಿನ್ನೆ ಕರೆಯಲಾಗಿದ್ದ ಮಹತ್ವದ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಮಾಡಿ ಸರ್ಕಾರಕ್ಕೆ 21 ದಿನಗಳ ಗಡುವು ನೀಡುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ

ಹೌದು ವರ್ಗಾವಣೆ,ಬಡ್ತಿ ಸಮಸ್ಯೆ,ವೇತನ ತಾರತಮ್ಯ ಸೇರಿದಂತೆ ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಹಾಗೂ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಮುಂದಿನ 21 ದಿನಗಳಲ್ಲಿ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಶಾಲಾ ಕಾಲೇಜು ಗಳನ್ನು ಬಹಿಷ್ಕರಿಸಿ ಹೋರಾಟಕ್ಕಿಳಿಯಲು ಶಿಕ್ಷಕರು ಮತ್ತು ಉಪನ್ಯಾಸಕರ ಸಂಘಟನೆಗಳು ನಿರ್ಣಯಿಸಿವೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ನಡೆದ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರ ಸಂಘಟನೆ ಗಳ ಪ್ರತಿನಿಧಿಗಳ ಸಭೆಯಲ್ಲಿ ಈ ಸಂಬಂಧ ಒಕ್ಕೊರಲಿ ನಿಂದ ನಿರ್ಣಯ ಕೈಗೊಂಡಿದ್ದು ಸುಮಾರು 10 ಬೇಡಿಕೆ ಗಳನ್ನು ಸರ್ಕಾರದ ಮುಂದಿಡಲಾಗಿದೆ.

ಶಿಕ್ಷಕರ ಬೇಡಿಕೆಗಳು…..
ಪ್ರಮುಖವಾಗಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (Government School) ಕಾರ್ಯನಿರ್ವಹಿಸುತ್ತಿರುವ ಸುಮಾರು 75 ಸಾವಿರ ಪದವೀಧರ ಪ್ರಾಥಮಿಕ ಶಾಲಾ (1ರಿಂದ 5ನೇ ತರಗತಿ) ಶಿಕ್ಷಕರ ಹಿಂದಿನ ಸೇವಾ ಜ್ಯೇಷ್ಠತೆ ಪರಿಗಣಿಸಿ 6ರಿಂದ 8ನೇ ತರಗತಿಗೆ ಬೋಧನೆ ಮಾಡಲು ಮೇಲ್ದರ್ಜೆ ಅಥವಾ ವಿಲೀನಗೊಳಿಸಲು ಆದೇಶಿಸಬೇಕು.

1998-1999ರಲ್ಲಿ ಸೇವೆಗೆ ಸೇರಿ ನಂತರ ಸುಪ್ರೀಂ ಕೋರ್ಟ್‌ ಆದೇಶದಿಂದ ಸೇವೆಯಿಂದ ವಜಾಗೊಂಡಿದ್ದ 4000 ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು 2003ರಲ್ಲಿ ಮರು ನೇಮಕಗೊಂಡಿದ್ದು ಅವರೆಲ್ಲರಿಗೂ ಹಿಂದಿನ ಸೇವೆಯನ್ನು ಪರಿಗಣಿಸಿ ಕಾಲ್ಪನಿಕ ವೇತನ ನಿಗದಿಪಡಿಸಬೇಕು.



ಪದೋನ್ನತಿ ಪಡೆದ ಕಾರಣಕ್ಕೆ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಪ್ರೌಢ ಶಾಲಾ ಶಿಕ್ಷಕರು ಮತ್ತು ಉಪನ್ಯಾಸಕರು 10 ರಿಂದ 30 ವರ್ಷಗಳಿಂದ ಬಡ್ತಿ ಸೌಲಭ್ಯಗಳಿಂದ ವಂಚಿತ ರಾಗಿ ಬಡ್ತಿ ಪಡೆಯದ ಶಿಕ್ಷಕರಿಗಿಂತ ಕಡಿಮೆ ವೇತನ ಪಡೆಯುತ್ತಿದ್ದಾರೆ.ಈ ವೇತನ ತಾರತಮ್ಯ ಸರಿಪಡಿಸಬೇಕು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ನೀತಿ ಜಾರಿಗೊಳಿಸಬೇಕು ಅಂತರ ಜಿಲ್ಲಾ ವರ್ಗಾವಣೆಗೆ ಒಂದು ಬಾರಿ ಅವಕಾಶ ಕಲ್ಪಿಸಬೇಕು ಎಂದು ಸಭೆ ಒತ್ತಾಯಿಸಿತು.

ಬಿಡುವಿನ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಗಳಿಕೆ ರಜೆ ನೀಡಬೇಕು 40 ವರ್ಷಗಳಿಂದ ಪರಿಷ್ಕರಣೆಗೊಳ್ಳದೆ ಬಾಕಿ ಇರುವ ಶಿಕ್ಷಣ ಇಲಾಖೆಯ ಸಮಗ್ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಕಾಲಮಿತಿಯಲ್ಲಿ ರೂಪಿಸ ಬೇಕು.2008ರ ಆಗಸ್ಟ್‌ ನಂತರ ನೇಮಕಗೊಂಡ 2008, 2010 ಮತ್ತು 2013ರ ಬ್ಯಾಚ್‌ನ ಪ್ರೌಢ ಶಾಲಾ ಶಿಕ್ಷಕರಿಗೆ ಒಂದು ವಾರ್ಷಿಕ ವೇತನ ಬಡ್ತಿ ನೀಡಬೇಕು.ಪಿಯು ಉಪನ್ಯಾಸಕರ ವರ್ಗಾವಣೆ ಕಾಯ್ದೆ ಜಾರಿಗೆ ತರಬೇಕು. ಜೇಷ್ಠತೆ ಪಟ್ಟಿಗೆ ಅನುಗುಣವಾಗಿ ಪ್ರೌಢ ಶಾಲಾ ಶಿಕ್ಷಕರಿಗೆ ಪಿಯು ಕಾಲೇಜು ಉಪನ್ಯಾಸಕ ಹುದ್ದೆಗೆ ಬಡ್ತಿ ನೀಡಬೇಕು ಎಂದು ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ.

ಸರ್ಕಾರಿ ಶಾಲಾ ಪಿಯು ಕಾಲೇಜು ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಈಡೇರಿಸಲು ಸರ್ಕಾರ 21 ದಿನಗಳಲ್ಲಿ ಸ್ಪಂದಿಸದಿದ್ದರೆ ಇಂದಿನ ಸಭೆಯಲ್ಲಿ ಕೈಗೊಂಡಿರುವ ನಿರ್ಣಯದಂತೆ ಶಾಲಾ ಕಾಲೇಜು ಬಹಿಷ್ಕರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಶಿಕ್ಷಕರು, ಉಪನ್ಯಾಸಕರ ಹೋರಾಟಕ್ಕೆ ಸರ್ಕಾರಿ ನೌಕರರ ಸಂಘ ಸದಾ ಬೆಂಬಲ ವಾಗಿ ನಿಲ್ಲುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಕ್ಷರಿ ಸ್ಪಷ್ಟಪಡಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk