ಬೆಂಗಳೂರು –
ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ 25 ಪೊಲೀಸ್ ಅಧಿಕಾರಿಗಳಿಗೆ ಡಿವೈಎಸ್ಪಿ ಹುದ್ದೆಗೆ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ
ಹೌದು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ನಾಗರಾಜ್ ಎಂ.ಎನ್. ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿಯನ್ನಾಗಿ ಹಾಗೂ ಸಿಸಿಬಿ ಇನ್ಸ್ಪೆಕ್ಟರ್ ಆಗಿರುವ ತೇಲಿ ಬಸವರಾಜ್ ಅಲ್ಲಪ್ಪ ಅವರನ್ನು ರಾಜ್ಯ ಗುಪ್ತವಾರ್ತೆ ಡಿವೈಎಸ್ಪಿ ಯನ್ನಾಗಿ ನಿಯೋಜನೆ ಮಾಡಲಾಗಿದೆ.
ಸಿಟಿಎಸ್ಬಿಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಯೋಗೇಂದ್ರಕುಮಾರ್ ಅವರನ್ನು ಪೊಲೀಸ್ ಪ್ರಧಾನ ಕಚೇರಿಯ ಅಪರಾಧ ವಿಭಾಗದ ಡಿವೈಎಸ್ಪಿ ಹುದ್ದೆಗೆ ನಿಯೋಜಿಸಲಾಗಿದೆ.
ಈ ಮೇಲ್ಕಂಡ ಎಲ್ಲಾ ಬಡ್ತಿ ಹಾಗೂ ವರ್ಗಾವಣೆ ಪ್ರಭಾರಿ ನಿಯಮಕ್ಕೆ ಒಳಪಟ್ಟಿರುವುದರಿಂದ ಇದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು ಯಾರೊಬ್ಬರೂ ಬಡ್ತಿಯನ್ನು ಪೂರ್ವ ಅನ್ವಯವಾಗಿ ಕ್ರಮಬದ್ಧ ಗೊಳಿಸುವಂತೆ ಹಕ್ಕೊತ್ತಾಯ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ.