ಹಾವೇರಿ –
ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 30 ಜನ ಅಸ್ವಸ್ಥ ಗೃಹ ಪ್ರವೇಶಕ್ಕೆ ಬಂದು ಆಸ್ಪತ್ರೆಗೆ ದಾಖಲಾದ ನೆಂಟರು ಹೌದು ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 30 ಜನ ಅಸ್ವಸ್ಥರಾದ ಘಟನೆ ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲೂಕಿನ ತಿಮ್ಮೇನಹಳ್ಳಿಯಲ್ಲಿ ನಡೆದಿದೆ.
ಬಸವರಾಜ ಶೇಖಪ್ಪ ಎಂಬುವರ ಗೃಹಪ್ರವೇಶ ಕಾರ್ಯಕ್ರಮ ಇತ್ತು. ಈ ಹಿನ್ನಲೆ ಭೋಜನವನ್ನು ವ್ಯವಸ್ಥೆ ಮಾಡಲಾಗಿತ್ತು.ಬೆಳಿಗ್ಗೆ ಊಟ ಸೇವಿಸಿದ 30 ಕ್ಕೂ ಹೆಚ್ಚು ಜನ ಆಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೂಡಲೇ ಅಸ್ವಸ್ಥರನ್ನು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಸಿಕ್ಕಿದೆ. ಈ ಕುರಿತು ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂತೆ ನ್ಯೂಸ್ ಹಾವೇರಿ…..