ವಿಧಾನಸಭೆ –
ರಾಜ್ಯದಲ್ಲಿ 45,565 ಶಿಕ್ಷಕರ ಹುದ್ದೆ ಖಾಲಿಯಿದ್ದು, ಈಗಾ ಗಲೇ 15 ಸಾವಿರ ಶಿಕ್ಷಕರ ಕಾಯಂ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.ನವೆಂಬರ್ 6ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಿ ಮುಂದಿನ ವರ್ಷದ ಫೆಬ್ರವರಿ-ಮಾಚ್ರ್ ತಿಂಗಳಲ್ಲಿ ಮತ್ತೆ ಹೊಸ ನೇಮಕಾತಿ ಮಾಡಲಾಗುವುದು ಅಲ್ಲಿಯವರೆಗೆ ಅತಿಥಿ ಶಿಕ್ಷಕರ ಮೂಲಕ ನಿಭಾಯಿಸಲಾಗು ವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಬಿ. ಶಿವಣ್ಣ, ನಂಜೇಗೌಡ,ಬಿಜೆಪಿಯ ರಾಜುಗೌಡ ಪ್ರಶ್ನೆಗಳಿಗೆ ಉತ್ತರಿ ಸಿದ ಅವರು ರಾಜ್ಯದಲ್ಲಿ 45,565 ಹುದ್ದೆಗಳು ಖಾಲಿ ಇದ್ದರೆ, ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲೇ 18,477 ಹುದ್ದೆ ಖಾಲಿಯಿವೆ.
ರಾಜ್ಯದಲ್ಲಿ ಪ್ರತಿ 16 ವಿದ್ಯಾರ್ಥಿಗಳಿಗೆ ಒಬ್ಬರು ಶಿಕ್ಷಕರಿದ್ದರೆ, ಕಲ್ಯಾಣ ಕರ್ನಾಟಕದಲ್ಲಿ ಪ್ರತಿ 25 ವಿದ್ಯಾರ್ಥಿಗಳಿಗೆ ಒಬ್ಬ ರಂತೆ ಶಿಕ್ಷಕರು ಇದ್ದಾರೆ. ಈ ಶಿಕ್ಷಕರ ಕೊರತೆ ತಾತ್ಕಾಲಿಕ ವಾಗಿ ನೀಗಿಸಲು ಪ್ರಾಥಮಿಕ ಶಾಲೆಗಳಿಗೆ 27 ಸಾವಿರ, ಪ್ರೌಢ ಶಾಲೆಗಳಿಗೆ 5,159 ಸೇರಿದಂತೆ 32,159 ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ಜತೆಗೆ 15 ಸಾವಿರ ಕಾಯಂ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿ ಸಿದ್ದು 12-13 ಸಾವಿರ ಶಿಕ್ಷಕರ ನೇಮಕವಾಗುವ ನಿರೀಕ್ಷೆ ಯಿದೆ.ಹೊಸ ಅಭ್ಯರ್ಥಿಗಳಿಗೂ ಅವಕಾಶ ಸಿಗುವಂತೆ ಮಾಡಲು ನವೆಂಬರ್.6ರಂದು ಟಿಇಟಿ ನಡೆಸಿ ಮುಂದಿನ ವರ್ಷದ ಫೆಬ್ರುವರಿ-ಮಾರ್ಚ್ ನಲ್ಲಿ ಮತ್ತೆ ನೇಮಕಾತಿ ನಡೆಸಲಾಗುವುದು ಎಂದು ಹೇಳಿದರು.