ಶೀಘ್ರದಲ್ಲೇ ಮತ್ತೆ 15 ಸಾವಿರ ಶಿಕ್ಷಕರ ನೇಮಕಾತಿ ಕಲ್ಯಾಣ ಕರ್ನಾಟಕದ ಭಾಗಕ್ಕೆ 5 ಸಾವಿರ ನೀಡಲಾಗುತ್ತದೆ ಬಿ ಸಿ ನಾಗೇಶ್

Suddi Sante Desk

ಅಫಜಲಪುರ

ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ ಸರ್ಕಾರದಿಂದ 15 ಸಾವಿರ ಹೊಸ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಈ ಪೈಕಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದರು.

ತಾಲೂಕಿನ ದೇವಲ ಗಾಣಗಾಪೂರದಲ್ಲಿ ಸುದ್ದಿಗಾರರೊಂ ದಿಗೆ ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ ಅದನ್ನು ನಿವಾರಿಸಲು ಶಿಕ್ಷಕರ ನೇಮ ಕಾತಿಗೆ ಚಾಲನೆ ನೀಡಲಾಗಿದೆ.371(ಜೆ) ಮೀಸಲಾತಿಯಡಿ ಸ್ಥಳೀಯರು ನೇಮಕಾತಿ ಆಗುವುದರಿಂದ ಪ್ರದೇಶ ಬಿಟ್ಟು ಶಿಕ್ಷಕರು ಬೇರೆಡೆ ವರ್ಗಾವಣೆ ಆಗುವುದಿಲ್ಲ.ಕೋವಿಡ್‌ ಕಾರಣದಿಂದ ಕಳೆದ ವರ್ಷ ಸರಿಯಾಗಿ ಶಾಲೆಗಳು ನಡೆ ಯದ ಕಾರಣ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿ ಣಾಮ ಬೀರಿದೆ ಎಂದರು.ಹೀಗಾಗಿ ಪ್ರಸಕ್ತ ಶೈಕ್ಷಣಿಕ ಸಾಲಿ ನಿಂದ ಕಲಿಕಾ ಚೇತರಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕಲಿಕಾ ಚೇತರಿಕೆ ಕೋರ್ಸ್‌ ಬೋಧಿಸಿದ ನಂತರವೇ ಪಠ್ಯ ಬೋಧನೆ ಮಾಡಲಾಗುತ್ತದೆ.ಗ್ರಾಮೀಣ ಭಾಗದ ಮಕ್ಕಳ ಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ವಿರೋಧದ ನಡುವೆ ಮೊಟ್ಟೆ ವಿತರಣೆ ಮಾಡಿದ್ದೇವೆ ಎಂದರು.

ಶಿಕ್ಷಕರ ಕೊರತೆ ನೀಗಿಸಲು ರಾಜ್ಯಾದ್ಯಂತ 33 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ.ಇತ್ತೀಚೆಗೆ ಶಾಲಾ ಶಿಕ್ಷಕರ ಗೌರವ ಸಂಭಾವನೆಯನ್ನು 7500ದಿಂದ 10000 ಸಾವಿರ ರೂ.ಗಳಿಗೆ, ಪ್ರೌಢ ಶಾಲೆ ಶಿಕ್ಷಕರ ಗೌರವ ಸಂಭಾವನೆಯನ್ನು 8 ಸಾವಿರದಿಂದ 10500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.