ಶಾಲೆಯ ಊಟದಲ್ಲಿ ಸತ್ತ ಹಾವಿನ ಮರಿ,ಅಸ್ವಸ್ಥಗೊಂಡ 50 ವಿದ್ಯಾರ್ಥಿಗಳು – ಸ್ಥಳಕ್ಕೇ ಆರೋಗ್ಯಾಧಿಕಾರಿಗಳು ಭೇಟಿ…..

Suddi Sante Desk

ಯಾದಗಿರಿ –

ಶಾಲೆಯ ಉಪಹಾರದಲ್ಲಿ ಹಾವು ಪತ್ತೆಯಾಗಿ ನೋಡಲಾರದೆ ಅದನ್ನು ಸೇವಿಸಿ ನಂತರ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಯಾದಗಿರಿಯಲ್ಲಿ ನಡೆದಿದೆ.ಹೌದು ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಾದಗಿರಿ ತಾಲೂಕಿನ ಅಬ್ಬೆ ತುಮಕೂ ರಿನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದ್ದು

ಸಧ್ಯ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.ಬೆಳಿಗ್ಗೆ ಉಪಹಾರ ಸೇವಿಸಿದ ವಿದ್ಯಾರ್ಥಿಗಳು ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ.ಹಾವಿನ ಮರಿ ಪತ್ತೆಯಾದ ನಂತರ ಆತಂಕ ಗೊಂಡಿದ್ದಾರೆ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ಸಧ್ಯ 52 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಚಿಕಿತ್ಸೆಯನ್ನು ಪಡೆದು ಕೊಳ್ಳುತ್ತಿದ್ದಾರೆ.

ಹೆಚ್ಚಿನ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಗೆ ದಾಖಲು ಮಾಡ ಲಾಗಿದೆ.ಆಸ್ಪತ್ರೆಗೆ ಟಿಎಚ್ ಓ ಹಣಮಂತರೆಡ್ಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.ವಿದ್ಯಾರ್ಥಿಗಳ ಆರೋಗ್ಯ ವಿಚಾರಿ ಸಿದ ಟಿಎಚ್ ಓ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಅಂತಾ ಹೇಳಿದ್ದು ಅಗತ್ಯ ಚಿಕಿತ್ಸೆ ನೀಡಲಾ ಗುತ್ತಿದೆ ಎಂದು ಟಿಎಚ್ ಓ ಹಣಮಂತರೆಡ್ಡಿ ಮಾಹಿತಿ ನೀಡಿದ್ದು ಈ ಕುರಿತಂತೆ ಪೊಲೀಸರು ಕೂಡಾ ಪರಿಶೀಲನೆ ಮಾಡತಾ ಇದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.