ಚಿಕ್ಕಮಗಳೂರು –
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ನವೋದಯಾ ವಿದ್ಯಾಲಯದಲ್ಲಿ ಕೋವಿಡ್ ಸ್ಫೋಟ ಗೊಂಡಿದೆ ಮೂರು ದಿನದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಸೇರಿದಂತೆ ಶಾಲೆಯ 67 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.60 ವಿದ್ಯಾರ್ಥಿಗಳು 3 ಶಿಕ್ಷಕರು, 4 ಮಂದಿ ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬಾಳೆಹೊ ನ್ನೂರು ಸಮೀಪದ ಸಿಗೋಡುನಲ್ಲಿರುವ ವಸತಿ ಶಾಲೆ ಯಲ್ಲಿ ಮೊದಲು ಶಿಕ್ಷಕರಿಗೊಬ್ಬರಿಗೆ ಕೋವಿಡ್ ಕಾಣಿಸಿ ಕೊಂಡಿತ್ತು.ನಂತರ ಆರೋಗ್ಯ ಇಲಾಖೆಯು 418 ವಿದ್ಯಾ ರ್ಥಿಗಳು, ಸಿಬ್ಬಂದಿಗಳ ಸ್ವ್ಯಾಬ್ ಪಡೆದು ತಪಾಸಣೆ ನಡೆಸಿದೆ ಈ ವೇಳೆ 67 ಮಂದಿಯಲ್ಲಿ ಸೋಂಕು ಪತ್ತೆಯಾ ಗಿದೆ.
ಕೋವಿಡ್ ಸೋಂಕು ಪತ್ತೆಯಾದವರಲ್ಲಿ ಯಾವುದೇ ಲಕ್ಷಣ ಗಳಿಲ್ಲ ಸ್ವ್ಯಾಬ್ ಟೆಸ್ಟ್ ವೇಳೆ ಸೋಂಕು ದೃಡಪಟ್ಟಿದೆ. ಸೋಂಕಿತರನ್ನು ವಸತಿ ಶಾಲೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ.
ಇನ್ನೂ ಸುದ್ದಿ ತಿಳಿದ DHO ಡಾ.ಉಮೇಶ್ ಮತ್ತು ಸರ್ವೇಕ್ಷ ಣಾಧಿಕಾರಿ ಡಾ.ಮಂಜುನಾಥ್, ಆರೋಗ್ಯ ಸಿಬ್ಬಂದಿ ಭೇಟಿ ನೀಡಿದ್ದಾರೆ ಸ್ಥಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.