ಹುಬ್ಬಳ್ಳಿ –
ಹೌದು 6ನೇ ತರಗತಿಯ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಮಕ್ತುಮ್ ಮಹ್ಮದ್ರಫಿ ಮನಿಯಾರ್ (13) ಮೃತಪಟ್ಟಿರುವ ಬಾಲಕನಾಗಿದ್ದಾನೆ.
ಕಲಘಟಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರನೆಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಶಾಲೆಯಲ್ಲಿ ಕುಸಿದು ಬಿದ್ದಿದ್ದ ವಿದ್ಯಾರ್ಥಿಯನ್ನು ಕೂಡಲೆ ಕಲಘಟಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದರು ಶಿಕ್ಷಕರು ಆದರೂ ಚಿಕಿತ್ಸೆ ಫಲಿಸದೇ ಮಕ್ತುಮ್ ಹೃದಯಾ ಘಾತದಿಂದ ಉಸಿರು ಚೆಲ್ಲಿದ್ದಾನೆ.
ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆ ಯಿಂದ ಬಳಲುತ್ತಿದ್ದನಂತೆ ಮಕ್ತುಮ್.ಇನ್ನೂ ಮೃತ ವಿದ್ಯಾರ್ಥಿಗೆ ಶಾಲೆಯ ಸಮಸ್ತ ಶಿಕ್ಷಕ ಬಂಧುಗಳು,ವಿದ್ಯಾರ್ಥಿಗಳು ಇಲಾಖೆಯ ಅಧಿಕಾ ರಿಗಳು ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್…..