ಶ್ರೀಮತಿ ಚಂದ್ರಕಲಾ ಕೊಟಬಾಗಿ ಅವರೇ ಈ ಬಾರಿ ನಮ್ಮ ವಾರ್ಡ್ ಗೆ ಬಾಸ್ ಎನ್ನುತ್ತಿದ್ದಾರೆ 10 ನೇ ವಾರ್ಡ್ ಜನತೆ….

Suddi Sante Desk

ಧಾರವಾಡ –

ಧಾರವಾಡದ 10ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮತಿ ಚಂದ್ರಕಲಾ ಕೊಟಬಾಗಿ ಪರ ಗೆಲುವಿನ ಅಲೆ ಕಂಡು ಬರತ್ತಿದೆ.ಹೌದು ಈ ಹಿಂದೆ ಪಕ್ಷದಲ್ಲಿದ್ದುಕೊಂಡು ಅಧಿಕಾರದಲ್ಲಿ ಇರದಿದ್ದರೂ ಕೂಡಾ ಸಾಕಷ್ಟು ಪ್ರಮಾಣದಲ್ಲಿ ಕೆಲಸ ಕಾರ್ಯ ಗಳನ್ನು ಮಾಡಿದ ಇವರಿಗೆ ವಾರ್ಡ್ ನಲ್ಲಿ ಮತದಾ ರರು ಉತ್ತಮವಾದ ಸ್ಪಂದನೆ ನೀಡಿದ್ದಾರೆ.

ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕೂಡಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಮತ್ತು ಸಂಸದರು ಕೇಂದ್ರದ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರೊಂದಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನವನ್ನು ತಗೆದುಕೊಂಡು ಬಂದು ಅಭಿವೃದ್ದಿ ಯನ್ನು ಮಾಡಿರುವ ಇವರು ಈಗ ವಾರ್ಡ್ ನ ಜನತೆಯ ಸೇವೆಗೆ ಮುಂದಾಗಿದ್ದಾರೆ.

ಹೀಗಾಗಿ ಸಧ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಯನ್ನು ಮಾಡಿದ್ದಾರೆ.ಅಖಾಡಕ್ಕೆ ಇಳಿದಾಗಿನಿಂದ ಸಂತಸಗೊಂಡಿರುವ ವಾರ್ಡ್ ನ ಜನರು ಮತದಾರರು ಈಗ ಚಂದ್ರಕಲಾ ಕೊಟಬಾಗಿ ಪರ ಧ್ವನಿಯಾಗಿ ನಿಂತುಕೊಂಡಿದ್ದಾರೆ.ನಾಮಪತ್ರ ಸಲ್ಲಿಸಿ ಪ್ರಚಾರ ಕೈಗೊಂಡ ಇವರಿಗೆ ಆರಂಭದಿಂದಲೂ ಗೆಲುವಿನ ಮಾತುಗಳನ್ನು ಹೇಳುತ್ತಿರುವ ಮತದಾರರು ಬದಲಾವಣೆ ಬಯಸಿದ್ದೇವೆ ಅದು ನಿಮ್ಮಿಂದಾಗಲಿ ಎನ್ನುತ್ತಿದ್ದಾರೆ.

ಹೀಗಾಗಿ ವಾರ್ಡ್ ನಲ್ಲಿ ಸಧ್ಯ ಬಿಜೆಪಿ ಪರ ಅಲೆ ಜೋರಾಗಿ ಕೇಳಿ ಬರುತ್ತಿದ್ದು ಹೊಸ ಕನಸು ಹೊಸ ಅಭಿವೃದ್ದಿಯ ಯೋಜನೆಗಳೊಂದಿಗೆ ಸ್ಪರ್ಧೆ ಮಾಡಿರುವ ಇವರಿಗೆ ವಾರ್ಡ್ ನಲ್ಲಿ ಮತದಾರರು ಜೈ ಜೈ ಎನ್ನುತ್ತಿದ್ದು ಈ ಬಾರಿ ವಾರ್ಡ್ ನಲ್ಲಿ ನಿಮ್ಮದೇ ಗೆಲುವು ನಿವೇ ನಮಗೆ ಬಾಸ್ ಎನ್ನುತ್ತಾ ಗೆಲುವಿನ ಮಾತುಗಳನ್ನು ಹೇಳಿ ಆಶೀರ್ವಾದವನ್ನು ಮಾಡುತ್ತಿ ದ್ದಾರೆ.

ಹೀಗಾಗಿ ವಾರ್ಡ್ ನಲ್ಲಿ ಚಂದ್ರಕಲಾ ಕೊಟಬಾಗಿ ಯವರು ಅಬ್ಬರದ ಪ್ರಚಾರವನ್ನು ಮಾಡುತ್ತಿದ್ದಾರೆ.
ಬಿಡುವಿಲ್ಲದೇ ಅಬ್ಬರದ ಪ್ರಚಾರವನ್ನು ಮಾಡುತ್ತಿ ದ್ದಾರೆ. ಕೇಂದ್ರದಲ್ಲಿ ನಮ್ಮದೇ ಸರ್ಕಾರ ರಾಜ್ಯದಲ್ಲಿ ನಮ್ಮ ಸರ್ಕಾರ ಹೀಗಾಗಿ ಪಾಲಿಕೆಯಲ್ಲೂ ನಾವೇ ಅಧಿಕಾರಕ್ಕೆ ಬಂದರೆ ಅನುಕೂಲವಾಗುತ್ತದೆ ಎಂದು ಕೊಂಡಿರುವ ಇವರು ಮತದಾರರಲ್ಲಿ ಅಭಿವೃದ್ದಿಯ ಕೆಲಸ ಕಾರ್ಯಗಳೊಂದಿಗೆ ಬಿಡುವಿಲ್ಲದೇ ಮತಯಾ ಚನೆಯಲ್ಲಿ ತೊಡಗಿದ್ದಾರೆ.

ವಾರ್ಡ್ ಕೆಐಡಿಬಿ ಲೇ ಏಔಟ್ ನಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀಮತಿ ಚಂದ್ರಕಲಾ ಕೊಟಬಾಗಿ ಅವರ ಪರ ಅವರ ಆಪ್ತರು ಪಕ್ಷದ ಕಾರ್ಯಕರ್ತರು ಮುಖಂಡರು ಅಭಿಮಾನಿಗಳು ಮತಯಾಚನೆ ಮಾಡಿದರು.ಉಳುವವ್ವ ಕೊಟಬಾಗಿ,ಪಾರವ್ವ ದಾಳಿ, ಶಿವನಗೌಡ ಪಾಟೀಲ, ಸಂತೋಷ ಎಸ್ ಎಮ್, ಆತ್ಮಾನಂದ ಪಾಟೀಲ, ಸಂಜು ಸಾಲಿಮಠ,ಮಂಜುನಾಥ ಹಂಚಿನಮನಿ ಸೇರಿದಂತೆ ಹಲವರು ಈ ಒಂದು ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.