ವಾರ್ಡ್ 1 ರಲ್ಲಿ ಈ ಬಾರಿ ನೂರಕ್ಕೆ ನೂರರಷ್ಟು ನಿವೇ ಎನ್ನುತ್ತಿದ್ದಾರೆ ಮತದಾರರು – ನಿರ್ಮಲಾ ಹೊಂಗಲ ಅವರೇ ಈ ಬಾರಿ ನಿಶ್ಚಿತ ಮತದಾರರ ಮಾತು…..

Suddi Sante Desk

ಧಾರವಾಡ –

ಬದಲಾವಣೆ ಬಯಸಿ ಹೊಸ ಕನಸಿನೊಂದಿಗೆ ಏನಾದರೂ ಮಾಡಿ ವಾರ್ಡ್ ನ್ನು ಅಭಿವೃದ್ದಿ ಮಾಡಬೇಕು ಮತದಾರರ ಸೇವೆಯೆ ನನ್ನ ಗುರಿ ನನ್ನ ಉದ್ದೇಶ. ಈಬಾರಿ ಪಾಲಿಕೆಯಲ್ಲೂ ನಾವೇ ಅಧಿಕಾ ರವನ್ನು ಹಿಡಿಯೊದು ಹೀಗೆ ಎಂದುಕೊಂಡು ಧಾರವಾಡದ ವಾರ್ಡ್ 1 ರಲ್ಲಿ ಕಾಂಗ್ರೇಸ್ ಪಕ್ಷದಿಂದ ನಿರ್ಮಲಾ ಹೊಂಗಲ ಸ್ಪರ್ಧೆ ಮಾಡಿದ್ದಾರೆ.

ಪಕ್ಷದಿಂದ ಟಿಕೇಟ್ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಅಖಾಡಕ್ಕೆ ಇಳಿದಿರುವ ಇವರು ಈಗಾಗಲೇ ಪಕ್ಷದಲ್ಲಿದ್ದುಕೊಂಡು ಈ ಹಿಂದೆ ಶಾಸಕರು ಮೂಲಕ ಸಾಕಷ್ಟು ಜನರ ಸೇವೆಯನ್ನು ಮಾಡಿ ಅಭಿವೃದ್ದಿ ಕೆಲಸ ಕಾರ್ಯಗಳನ್ನು ಮಾಡಿಸಿದ್ದಾರೆ.

ಇನ್ನೂ ಇವರ ಈ ಒಂದು ಸ್ಪರ್ಧೆಯಿಂದ ವಾರ್ಡ್ ನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸ್ಪಂದನೆ ಸಿಗುತ್ತಿದೆ. ವಾರ್ಡ್ ಬದಲಾವಣೆಯಾದರೂ ಕೂಡಾ ಹೊಸ ಕನಸು ಹೊಸ ಉತ್ಸಾಹದೊಂದಿಗೆ ಕಣಕ್ಕಿಳಿದಿರುವ ಇವರಿಗೆ ಉತ್ತಮ ಸ್ಪಂದನೆ ಸಿಗುತ್ತಿದ್ದು ಪ್ರಚಾರಕ್ಕೆ ಹೋದಲ್ಲೆಲ್ಲ ಒಳ್ಳೇಯ ಭರವಸೆಯ ಮಾತುಗಳು ಉತ್ಸಾಹದ ಗೆಲುವಿನ ಆಸೆಯ ಮಾತುಗಳನ್ನು ವಾರ್ಡ್ ನ ಜನರು ಹೇಳುತ್ತಿದ್ದಾರೆ.

ಪ್ರಚಾರಕ್ಕೆ ಹೋದಲೆಲ್ಲ ನಮಗೂ ನಿಮ್ಮಂಥವರೇ ಮಹಿಳಾ ನಾಯಕಿಯರು ಬೇಕಾಗಿದೆ ಬದಲಾವಣೆ ಬೇಕಾಗಿದೆ ನಮಗೆ ನೀವು ಬಂದಿದ್ದು ತುಂಬಾ ತುಂಬಾ ಅನುಕೂಲ ಯಾವುದೇ ಕಾರಣಕ್ಕೂ ನಿಮ್ಮೊಂದಿಗೆ ನಾವಿದ್ದೇವೆ ನೀವು ಬಂದರೆ ನಮಗೂ ಅನುಕೂಲ ನಿಮ್ಮಂಥ ಸರಳ ಸಜ್ಜನಿಕೆಯ ನಾಯಕರೇ ನಮ್ಮ ವಾರ್ಡ್ ಗೆ ಬೇಕು ಎನ್ನುತ್ತಿದ್ದಾರೆ.

ಇದೇ ಒಂದು ಉತ್ಸಾಹದಲ್ಲಿ ನಿರ್ಮಲಾ ಹೊಂಗಲ ಅವರು ಪ್ರಚಾರವನ್ನು ಮಾಡುತ್ತಿದ್ದಾರೆ.ಇಂದು ಕೂಡಾ ವಾರ್ಡ್ ನ ಹಲವೆಡೆ ಅಬ್ಬರದ ಪ್ರಚಾರ ವನ್ನು ಮಾಡಿದರು.ವಾರ್ಡ್ ನ ಬನಶ್ರೀ ನಗರ, ವೀರಭದ್ರೇಶ್ವರ ನಗರ ಸೇರಿದಂತೆ ಹಲವೆಡೆ ಪಾದ ಯಾತ್ರೆಯ ಮೂಲಕ ತೆರಳಿ ಪ್ರಚಾರ ಮಾಡುತ್ತಾ ಮತಯಾಚನೆ ಮಾಡಿದರು.

ನಿರ್ಮಲಾ ಹೊಂಗಲ ಅವರೊಂದಿಗೆ ಪಕ್ಷದ ಕಾರ್ಯಕರ್ತರು ಮುಖಂಡರಾದ ನಾಗರಾಜ ಗುರಿಕಾರ ಸೇರಿದಂತೆ ಹಲವರು ಸಾಥ್ ನೀಡಿ ಮತಯಾಚನೆ ಮಾಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.