ಈಜಲು ಹೋಗಿ ಇಬ್ಬರು ಬಾಲಕರು ಸಾವು – ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕರು…..

Suddi Sante Desk

ಗೌರಿಬಿದನೂರು –

ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿದ್ದಾರೆ.ಹೌದು ಚಿಕ್ಕಬಳ್ಳಾಪೂರದ ಗೌರಿಬಿದನೂರು ತಾಲ್ಲೂಕಿನ ಹಳೇ ಊರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರಾದ ಒಂಭತ್ತನೆ ತರಗತಿ ವ್ಯಾಸಂಗ ಮಾಡುತ್ತಿದ್ದ ಹರಿ ಚರಣ್ ರೆಡ್ಡಿ (13) ಹಾಗೂ ಲಿಖಿತ್ (14)ಮೃತ ದುರ್ದೈವಿಗಳಾಗಿದ್ದಾರೆ.

ವಾಟದ ಹೊಸಹಳ್ಳಿ ಹೋಬಳಿಯ ಹಳೆ ಊರು ಗ್ರಾಮದವರಾದ ಈ ಬಾಲಕರು ಮಧ್ಯಾಹ್ನ ಈಜಾಡಲು ಗ್ರಾಮದ ಹೊರ ವಲಯದ ಕೃಷಿ ಹೊಂಡಕ್ಕೆ ಹೋಗಿದ್ದು, ಈಜು ಬಾರದೆ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಸಂಜೆಯಾದರು ಮಕ್ಕಳು ಮನೆಗೆ ಬಾರದ ಹಿನ್ನಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಇನ್ನೂ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹಗಳನ್ನು ಹೊರೆಗೆ ತೆಗೆದಿದ್ದಾರೆ.ಇತ್ತ ಸುದ್ದಿ ತಿಳಿದ ಗ್ರಾಮಾಂತರ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.