This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ನಾನು ತಪ್ಪು ಮಾಡಿಲ್ಲ ಮಾಡಿಲ್ಲ ರಮೇಶ್ ಜಾರಕಿಹೋಳಿ ಮಾತು

WhatsApp Group Join Now
Telegram Group Join Now

ಬೆಂಗಳೂರು –

ರಾಸಲೀಲೆ ಪ್ರಕರಣದಲ್ಲಿ ಗಂಭೀರ ಆರೋಪ ಎದುರಿಸುತ್ತಿರುವ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ, ತಮ್ಮ ವಿರುದ್ಧದ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಜೊತೆಗೆ ನಾನು ತಪ್ಪು ಮಾಡಿಲ್ಲ ಮಾಡಿಲ್ಲ ನಾನೇಕೆ ರಾಜೀನಾಮೆ ನೀಡಲಿ ಎಂದು ಅವರು ಪ್ರಶ್ನಿಸಿದ್ದಾರೆ.ಈ ಒಂದು ಪ್ರಕರಣ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಅವರು ಸ್ಪಷ್ಟೀಕರಣ ನೀಡಿದರು

ತಮ್ಮ ವಿರುದ್ಧ ದಾಖಲಾದ ದೂರಿನ ಕುರಿತು ಬೆಂಗಳೂರಿನಲ್ಲಿ ಮೊದಲ ಪ್ರತಿಕ್ರಿಯೆ ನೀಡಿರುವ ರಮೇಶ ಜಾರಕಿಹೊಳಿ, ಈ ಸಿ.ಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಲಿ. ಮಂತ್ರಿ ಮಾತ್ರವಲ್ಲ, ಎಂಎಲ್ಸಿ ಸ್ಥಾನಕ್ಕೆ ಕೂಡ ರಾಜೀನಾಮೆ ನೀಡುತ್ತೇನೆ. ಆದರೆ ಇದರಲ್ಲಿ ನಾನು ಯಾವುದೇ ತಪ್ಪಿಲ್ಲ. ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ದಿನೇಶ ಕಲ್ಲಹಳ್ಳಿ ಯಾರೋ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ಹೇಳಿದ್ದಾರೆ.ದೈವದ ಮೇಲೆ ನನಗೆ ನಂಬಿಕೆ ಇದೆ. ದೇವರ ಸಾಕ್ಷಿಯಾಗಿ ಹೇಳುತ್ತೇನೆ. ಆ ಯುವತಿ ಬಗ್ಗೆ ನನಗೆ ಗೊತ್ತಿಲ್ಲ. ಏನಾದರೂ ತಪ್ಪು ಮಾಡಿದ್ರೆ ಗಲ್ಲಿಗೇರಿಸಿ ಎಂದು ಹೇಳಿದ್ದಾರೆ.ನಾನು ಮೈಸೂರಿನಲ್ಲಿದ್ದೆ. ಮಾಧ್ಯಮ ದಲ್ಲಿ ಸುದ್ದಿ ತಿಳಿದು ಆಘಾತವಾಯಿತು. ಈ ಸಿ.ಡಿ. ಶೇಕಡ ನೂರರಷ್ಟು ನಕಲಿ. ಈ ಸಿ.ಡಿ. ಸ್ಫೋಟ ಎಲ್ಲ ರಾಜಕೀಯ ಗಿಮಿಕ್. ನನಗೆ ಸಿಡಿ ರಾಜಕೀಯದ ಬಗ್ಗೆ ಗೊತ್ತಿಲ್ಲ. ಇದರ ಬಗ್ಗೆ ಸಮಗ್ರ ತನಿಖೆ ಆಗಲಿ. ತಪ್ಪೇ ಮಾಡದ ನಾನೇಕೆ ರಾಜೀನಾಮೆ ನೀಡಲಿ? ಎಂದಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk