ಎರಡು ದಿನಗಳ ಬಿಜೆಪಿ ಕಾರ್ಯಕಾರಣಿ – ಸಜ್ಜಾಗುತ್ತಿದೆ ಬೆಣ್ಣಿನಗರಿ ದಾವಣಗೇರಿ…..

Suddi Sante Desk

ದಾವಣಗೆರೆ –

ಸೆಪ್ಟಂಬರ್ 18 ಮತ್ತು 19 ರಂದು ಎರಡು ದಿನಗಳ ಕಾಲ ದಾವಣಗೇರಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ.ಈ ಒಂದು ಸಭೆಯ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆ ಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.ಸೆಪ್ಟಂಬರ್ 18ರ ಸಂಜೆ ದಾವಣಗೆರೆಯ ಅಪೂರ್ವ ರೆಸಾರ್ಟ್‌ ನಲ್ಲಿ ಕಾರ್ಯಕಾರಿಣಿ ಸಬೆ ನಡೆಯಲಿದೆ. ಅಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದ್ದು ತೀವ್ರ ಕುತೂಹಲವನ್ನು ಕೆರಳಿಸಿದೆ

ಇನ್ನೂ ಪ್ರಮುಖವಾಗಿ ಅಂದು ಬೆಳಿಗ್ಗೆ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ಪದಾಧಿಕಾರಿಗಳಿಗೆ ಮತ್ತಷ್ಟು ಪಕ್ಷ ಸಂಘಟನೆ, ಬಲಪಡಿಸುವ ಕುರಿತಂತೆ ಸಲಹೆ ನೀಡಲಿದ್ದಾರೆ.ಇನ್ನೂ ಎರಡನೇಯ ದಿನ ವಾದ ಸೆಪ್ಟಂಬರ್ 19ರಂದು ತ್ರಿಶೂಲ್ ಕಲಾಭವನ ದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್.‌ ಸಂತೋಷ್, ಮಾಜಿ ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರು, ಎಂಎಲ್‌ಸಿಗಳು, ಸಂಸದರು, ಕೇಂದ್ರದ ನಾಲ್ವರು ಸಚಿವರಾದ ಶೋಭಾ ಕರಂದ್ಲಾಜೆ,ಎನ್. ನಾರಾಯಣ ಸ್ವಾಮಿ, ರಾಜೀವ್ ಚಂದ್ರಶೇಖರ್, ಪ್ರಹ್ಲಾದ್ ಜೋಷಿ ಪಾಲ್ಗೊಳ್ಳ ಲಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.