ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಬಂದ CM……

Suddi Sante Desk

ಹುಬ್ಬಳ್ಳಿ –

ಮುಖ್ಯಮಂತ್ರಿ ಸಂಬಂಧಿ ಆಪ್ತ ಸ್ನೇಹಿತ ರಾಜು ಪಾಟೀಲ ನಿಧನದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತರಾಗಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು ನೇರವಾಗಿ ರಾಜು ಪಾಟೀಲ ಅವರ ಮನೆಗೆ ತೆರಳಿದರು.

ಮನೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದ ಪಾರ್ಥಿವ ಶರೀರಕ್ಕೆ ನಮಸ್ಕರಿಸಿ ಪುಷ್ಪಾರ್ಪಣೆ ಮಾಡಿ ನಂತರ ರಾಜು ಪಾಟೀಲರನ್ನು ನೋಡಿ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದರು.

ಈ ಒಂದು ಸಮಯದಲ್ಲಿ ಅವರ ಅಕ್ಕಪಕ್ಕದಲ್ಲಿದ್ದ ಆಪ್ತ ಸ್ನೇಹಿತರು ಬಂಧು ಬಳಗದವರು ಮುಖ್ಯ ಮಂತ್ರಿ ಅವರನ್ನು ಸಮಾಧಾನ ಮಾಡಿದರು.

ಇನ್ನೂ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದ್ದು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ ಮತ್ತೆ ಬೆಂಗಳೂರಿನತ್ತ ಮುಖ್ಯಮಂತ್ರಿ ತೆರಳಲಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.