ಸರ್ಕಾರಿ ಅಧಿಕಾರಿಗಳಿಗೆ ಧಮ್ಕಿ ದಾಖಲಾಯಿತು ದೂರು…..

Suddi Sante Desk

ಬೆಂಗಳೂರು –

ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್ ಅಧಿಕಾರಿಯೊ ಬ್ಬರಿಗೆ ಧಮ್ಕಿ ಹಾಕಿ, ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲನ್ನೇರಿದೆ. ಹೌದು ಟಿ. ಕುಮಾರ್ ಮತ್ತು ಇತರರ ವಿರುದ್ಧ ಬೆಂಗಳೂರಿನ ಮಹಾಲಕ್ಷ್ಮೀ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೆಎಎಸ್ ಅಧಿಕಾರಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ. ನಾಗರಾಜಪ್ಪ ಅವರು ಈ ದೂರು ನೀಡಿದ್ದಾರೆ.

ಮಹಾಲಕ್ಷ್ಮಿ ಬಡಾವಣೆಯ ಭೋವಿಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸೆ.17 ರಂದು ಈ ಘಟನೆ ನಡೆದಿದೆ.ಸರ್ಕಾರಿ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿದ ಇವರು ತಮಗೆ ಬೇಕಾದ ವ್ಯಕ್ತಿಗೆ ಹಣ ಮಂಜೂರಾತಿ ಮಾಡುವಂತೆ ಧಮ್ಕಿ ಹಾಕಿದ್ದಾರೆ.ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು ಇಲ್ಲದಿದ್ದರೆ ಸರ್ಕಾರಿ ಕಚೇರಿಯಲ್ಲಿ ದೊಂಬಿ ಎಬ್ಬಿಸುತ್ತೇವೆ.ಸರ್ಕಾರಿ ಕಚೇರಿಗೆ ಬೆಂಕಿ ಇಟ್ಟು ಕೊಲೆ ಮಾಡುವುದಾಗಿಯೂ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿ ನೀಡಲಾಗಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.