ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಶಿಕ್ಷಕಿ – ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಕ್ಷಕಿ ಶಾರದಾ ಟೀಚರ್ ಗೆ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘ ದಿಂದ ಅಭಿನಂದನೆ…..

Suddi Sante Desk

ದಾವಣಗೆರೆ –

ದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ಶಿಕ್ಷಕಿ ಶ್ರೀಮತಿ ಶಾರದಾ ಎಸ್ ಮಲ್ಹಾರ ಅವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಇಂದು ನಡೆದ ಸ್ಪರ್ಧೆ ಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದ ಇವರು ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿ ದ್ದಾರೆ.

ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ದ ಜಿಲ್ಲಾ ಘಟಕ ಯಾದಗಿರ ತಾಲ್ಲೂಕು ಘಟಕ ಶಹಾಪುರ ಸಂಘಟನಾ ಕಾರ್ಯದರ್ಶಿಯಾಗಿರುವ ಇವರ ಸಾಧನೆಗೆ ಅಭಿನಂದ ನೆಗಳ ಶುಭಹಾರೈಕೆ ನಾಡಿನ ಮೂಲೆ ಮೂಲೆಗಳಿಂದ ಕೇಳಿ ಬರುತ್ತಿದೆ.

ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ನಮ್ಮ ತಾಲೂಕಿಗೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆಂದು ಶಹಾಪುರ ತಾಲೂಕಿನ ಸಮಸ್ತ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇದರೊಂದಿಗೆ ರಾಜ್ಯ ಘಟಕದ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ಅಧ್ಯಕ್ಷ ರಾಗಿರುವ ಡಾ ಲತಾ ಎಸ್ ಮುಳ್ಳೂರ ಹಾಗೂ ಪ್ರಧಾನ ಕಾರ್ಯಕರ್ಶಿ ಜ್ಯೋತಿ ಹೆಚ್ ಅವರು ಸಂಘದ ಸರ್ವ ಸದಸ್ಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.