ಸೋಮವಾರದಿಂದ ಶುಕ್ರವಾರ ದವರೆ ಅಷ್ಟೇ ಶಾಲೆಗಳು ಹೊರ ಬಿತ್ತು ಶಾಲೆಗಳಿಗಾಗಿ ಸರ್ಕಾರದಿಂದ ಕೆಲವೊಂದಿಷ್ಟುಮಾರ್ಗಸೂಚಿಗಳು

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ.ಈ ನಿಟ್ಟಿ ನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.ಹೊಸ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳು ತರಗತಿಗೆ ಬರುವುದು ಕಡ್ಡಾಯವಲ್ಲ.ಶಾಲೆಗಳು ಭೌತಿಕ ತರಗತಿಯೊಂದಿಗೆ ಆನ್ ಲೈನ್ ಸೇರಿದಂತೆ ಪರ್ಯಾಯ ಮಾರ್ಗದಲ್ಲಿ ತರಗತಿ ನಡೆಸಬೇಕು.ವಿದ್ಯಾರ್ಥಿಗಳು ತಮಗೆ ಇಷ್ಟವಾದ ರೀತಿಯಲ್ಲಿ ತರಗತಿಗೆ ಹಾಜರಾಗಬಹುದು. ಯಾವ ವಿದ್ಯಾರ್ಥಿಗಳಿಗೂ ಶಾಲೆಗೆ ಬರುವಂತೆ ಶಿಕ್ಷಕರು ಒತ್ತಾಯ ಮಾಡುವಂತಿಲ್ಲ ವಿದ್ಯಾರ್ಥಿಗಳು ಶಾಲೆಗೆ ಬರುವುದಕ್ಕೆ ಪಾಲಕರ ಅನುಮತಿ ಕಡ್ಡಾಯಗೊಳಿಸಲಾ ಗಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ತರಗತಿ ಗಳು ನಡೆಯುತ್ತವೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಮಾತ್ರ ಶಾಲಾ ಅವಧಿ ಇರುತ್ತದೆ ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಬೇಕು. 15 ರಿಂದ 20 ವಿದ್ಯಾರ್ಥಿಗಳ ಗುಂಪು ರಚಿಸಿ, ಒಂದು ದಿನ ತರಗತಿ, ಒಂದು ದಿನ ರಜೆಯ ವ್ಯವಸ್ಥೆಯಂತೆ ಶಿಕ್ಷಕರು ಪಾಠ ಮಾಡಬೇಕು. ಶನಿವಾರ ಹಾಗೂ ಭಾನುವಾರ ಶಾಲಾ ಕೊಠಡಿಗಳನ್ನು ಸ್ವಚ್ಛಗೊಳಿಸಲೇಬೇಕು ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ಹೇಳಿದೆ.ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.ಎರಡೂ ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಬೇಕು.ಶಾಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಗೊಳಿಸಲಾಗಿದೆ.ಈ ರೀತಿ ಕಟ್ಟುನಿಟ್ಟಾಗಿ ಶಾಲೆಗಳನ್ನು ಆರಂಭಿಸಬೇಕು ಎಂದು ಸರ್ಕಾರ ಎಲ್ಲ ಶಾಲೆಗಳಿಗೆ ಎಚ್ಚರಿಕೆ ನೀಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.