ಮಾರ್ಗಸೂಚಿ ಪ್ರಕಟಗೊಂಡ ಬೆನ್ನಲ್ಲೇ ಅಧಿಕಾರಿಗಳ ಸಭೆ ಕರೆದ ಶಿಕ್ಷಣ ಸಚಿವರು – ಕುತೂಹಲ ಮೂಡಿಸಿದ ಡಿಸೆಂಬರ್ 9 ರ ಸಭೆ

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮತ್ತೆ ಶುರುವಾಗಿದೆ ಇದನ್ನು ಅರಿತ ಶಿಕ್ಷಣ ಇಲಾಖೆ ಶಾಲೆಗಳಿಗಾಗಿ ಪ್ರತ್ಯೇಕ ವಾದ ಮಾರ್ಗಸೂಚಿಗಳನ್ನು ಪ್ರಕಟ ಮಾಡಿದ್ದು ಇನ್ನೂ ಇದರ ಬೆನ್ನಲ್ಲೇ ಶಿಕ್ಷಣ ಸಚಿವರು ಅಧಿಕಾರಿಗಳ ಸಭೆಯನ್ನು ಕರೆದಿದ್ದಾರೆ.ಹೌದು ಶಾಲೆ ಹಾಗೂ ಕಾಲೇಜುಗಳಿಂದಲೇ ಕೊರೊನಾ ಸ್ಫೋಟವಾಗುತ್ತಿದ್ದು ಹೀಗಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಧಿಕಾರಿಗಳ ಸಭೆ ಕರೆದಿದ್ದಾರೆ ಶಾಲೆ ಹಾಗೂ ಕಾಲೇಜುಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾ ಗುತ್ತಿರುವ ಹಿನ್ನೆಲೆಯಲ್ಲಿ ಇಲಾಖೆಯ ಪ್ರಧಾನಿ ಕಾರ್ಯದ ರ್ಶಿಗೆ ಈಗಾಗಲೇ ಅವರು ಪತ್ರ ಬರೆದಿದ್ದಾರೆ.

ಡಿಸೆಂಬರ್ 9ರಂದು ತಾಂತ್ರಿಕ ಸಲಹಾ ಸಮಿತಿ ತಜ್ಞರು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಆರೋಗ್ಯ ಅಧಿಕಾ ರಿಗಳ ಸಭೆ ಕರೆದಿದ್ದಾರೆ.ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಕುರಿತು ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಈಗಾಗಲೇ ಸರ್ಕಾರ ಶಾಲೆಗಳಲ್ಲಿ ಅನುಸರಿಸಬೇಕಾಗಿರುವ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು ಅದರಂತೆ ಶಾಲೆಗಳನ್ನು ನಡೆಸುವಂತೆ ಕಟ್ಟು ನಿಟ್ಟಾಗಿ ಸೂಚಿಸಿದೆ. ಇದರ ಬೆನ್ನಲ್ಲಿಯೇ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸುತ್ತಿದ್ದು, ಸರ್ಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.