ಫೀ ಕಟ್ಟಿಲ್ಲವೆಂದು ಶಾಲೆಯಿಂದ ವಿದ್ಯಾರ್ಥಿಗಳು ಹೊರಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಕೆ ಯಾಯಿತು ದೂರು…..

Suddi Sante Desk

ಗೋಣಿಕೊಪ್ಪಲು –

ಶಾಲೆಗೆ ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸಿಲ್ಲ ಎಂದು ಹೇಳಿ ವಿದ್ಯಾರ್ಥಿಗಳನ್ನು ಹೊರಕ್ಕೆ ಹಾಕಿದ ಘಟನೆ ಕೊಡಗಿನ ಗೋಣಿಕೊಪ್ಪಲಿನಲ್ಲಿ ನಡೆದಿದೆ.ಇಲ್ಲಿನ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿ ಮುತ್ತಣ್ಣ ಸೇರಿದಂತೆ 20 ವಿದ್ಯಾರ್ಥಿಗಳನ್ನು ತರಗತಿಗೆ ಸೇರಿಸದೇ ಗ್ರಂಥಾಲಯದಲ್ಲಿ ಕೂರಿಸುತ್ತಿದ್ದರಂತೆ.ಈ ಬಗ್ಗೆ ಬೇಸರ ಗೊಂಡ ಮುತ್ತಣ್ಣ ಎಂಬ ವಿದ್ಯಾರ್ಥಿಯ ತಂದೆ ಬೆಳ್ಳಿಯಪ್ಪ ಡಿಸೆಂಬರ್.1ರಂದು ಪ್ರಧಾನ ಮಂತ್ರಿ ಕಚೇರಿಗೆ ಇ-ಮೇಲ್‌ ಮೂಲಕ ದೂರು ಸಲ್ಲಿಸಿದ್ದಾರೆ.ದೂರು ಬಂದ ಹಿನ್ನೆಲೆಯಲ್ಲಿ ಶಾಲೆಗೆ ತೆರಳಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಮುತ್ತಣ್ಣನನ್ನು ಅಜ್ಜಿಯೊಂದಿಗೆ ತಮ್ಮ ಕಚೇರಿಗೆ ಕರೆಸಿಕೊಂಡು ಮಾಹಿತಿ ಪಡೆದುಕೊಂಡಿದ್ದಾರೆ ಶಾಲೆಯ ಪ್ರಾಂಶುಪಾಲರೊಂದಿಗೆ ಚರ್ಚಿಸಿದ ಬಳಿಕ ವಿದ್ಯಾರ್ಥಿಯನ್ನು ತರಗತಿಗೆ ಸೇರಿಸಲಾಗಿದೆ.

ಈ ಒಂದು ವಿಚಾರ ಕುರಿತು ಶಾಲೆಯ ವಿರುದ್ಧ ಪೋಷಕ ರೊಬ್ಬರು ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೊಡಗು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಇನ್ನೂ ಕೋವಿಡ್ ಸಂಕಷ್ಟದ ಕಾಲದಲ್ಲಿಯೂ ಮತ್ತೆ ಶುಲ್ಕ ಏರಿಸಿದ್ದಾರೆ.ಅದರ ಬಗ್ಗೆ ಕೇಳಿದರೆ ಪ್ರಾಂಶುಪಾಲರು ಸರಿಯಾಗಿ ಉತ್ತರಿಸಲಿಲ್ಲ.ಕೇವಲ ವಾಟ್ಸ್‌ ಆಪ್‌ ಮೆಸೇಜ್ ಹಾಕಿದ್ದರು.ಹೀಗಾಗಿ ಬೇಸರದಿಂದ ನೇರವಾಗಿ ಪ್ರಧಾನ ಮಂತ್ರಿಗೆ ಪತ್ರ ಬರೆದೆ.ಈಗ ಮಗನನ್ನು ತರಗತಿಗೆ ಸೇರಿಸು ತ್ತಿದ್ದಾರೆ.ಅಲ್ಲಿಂದ ಏನು ಸಂದೇಶ ಬಂದಿತ್ತೋ ಗೊತ್ತಿಲ್ಲ ಎಂದು ಪೋಷಕರು ಹೇಳಿದ್ದು ಮುಂದೆ ಇಲಾಖೆ ಯಾವ ಕ್ರಮವನ್ನು ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.