ವರ್ಗಾವಣೆಗೊಂಡ ಬೆನ್ನಲ್ಲೇ ಶಿಕ್ಷಕಿ ಆತ್ಮಹತ್ಯೆ – ನಿಗೂಢವಾಗಿ ಉಳಿದ ಸಾವಿನ ಕಾರಣ…..

Suddi Sante Desk

ಬಂಟ್ವಾಳ –

ಸರಕಾರಿ ಪ್ರೌಡಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ನಂತರ ಚಿಕಿತ್ಸೆ ಫಲಕಾರಿಯಾಗದೇ ನಂತರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳೂರಿ ನಲ್ಲಿ ನಡೆದಿದೆ

ಪ್ರಸ್ತುತ ಪುತ್ತೂರು ತಾಲೂಕಿನ ಅರಿಯಡ್ಕ ಸಮೀಪದ ಪಾಪೆಜಾಲು ಹೈಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸು ತ್ತಿದ್ದ ವಿಟ್ಲ ನಿವಾಸಿ ಪ್ರಿಯಾಕುಮಾರಿ(48) ಮೃತಪಟ್ಟವ ರಾಗಿದ್ದಾರೆ‌.ಡಿಸೆಂಬರ್ 13 ರಂದು ಬೆಳಿಗ್ಗೆ ವಿಟ್ಲ ಸಿಪಿಸಿ ಅರ್ ಐ ಬಳಿ ಇರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು.ಸೋಮವಾರ ಬೆಳಿಗ್ಗೆ ಬೇಗನೆ ಎದ್ದಿದ್ದ ಅವರು ಪತಿ ಸ್ನಾನದ ಕೋಣೆಯಲ್ಲಿದ್ದಾಗ ಹೊರಗೆ ಕೋಣೆ ಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಫತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಡಿ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಕಳೆದ ಗುರುವಾರದವರೆಗೆ ಅವರು ಪುತ್ತೂರಿನ ಹಾರಾಡಿ ಶಾಲೆಯಲ್ಲಿ ಪ್ರಭಾರ ಎಚ್‌ ಎಂ ಆಗಿ ಕಾರ್ಯ ನಿರ್ವಹಿಸು ತ್ತಿದ್ದರು.ಇತ್ತೀಚೆಗೆ ಅವರು ಪಾಪೆಜಾಲು ಹೈಸ್ಕೂಲಿಗೆ ವರ್ಗಾವಣೆಗೊಂಡಿದ್ದು ವರ್ಗಾವಣೆ ನಿಮಿತ್ತ ಶನಿವಾರ ವಷ್ಟೇ ಪಾಪೆಮಜಲು ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿ ದ್ದರು ಭಾನುವಾರ ರಜಾದಿನವಾಗಿದ್ದು ಮನೆಯಲ್ಲೇ ಇದ್ದರು
ಇವರ ಪತಿ ನಿವೃತ್ತ ಯೋಧರಾಗಿದ್ದು ಪ್ರಸ್ತುತ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ ಇವರಿಗೆ ಇಬ್ಬರು ಹೆಣ್ಣು ಮಕ್ಕಳಿ ದ್ದಾರೆ ಹನ್ನೊಂದು ವರ್ಷಗಳಿಂದ ಕಾಲ ಹಾರಾಡಿ ಶಾಲೆ ಯಲ್ಲಿ ಸೇವೆ ಸಲ್ಲಿಸಿದ್ದು ಆತ್ಮಹತ್ಯೆ ಗೆ ನಿಗೂಢವಾಗಿ ಕಾರಣ ಉಳಿದಿದ್ದು ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಾಡತಾ ಇದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.