ಮಾತೇ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ,ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ – ಇನ್ನೂ ಹಲವಾರು ಕಾರ್ಯಕ್ರಮ ಗಳಿಗೆ ಸರ್ವರಿಗೂ ಸ್ವಾಗತ…..

Suddi Sante Desk

ಹಾವೇರಿ –

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ.ರಾಣೇಬೆನ್ನೂರ ತಾಲೂಕು ಘಟಕದ ನೇತೃತ್ವದಲ್ಲಿ ಜನವರಿ 03.01.2022 ರಂದು ಮಾತೇ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ(ಹೊಸ ರಾಷ್ಟ್ರೀಯ ಶಿಕ್ಷಣ ನೀತಿ) ಹಾಗೂ ರಾಜ್ಯ ಕಾರ್ಯಕಾರಿಣಿ ಸಭೆ ಜರುಗಲಿದೆ

ಹೌದು ಈ ಒಂದು ಕಾರ್ಯಕ್ರಮ ವು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆಯಲಿದ್ದು ಕಾರ್ಯಕ್ರಮ ದಲ್ಲಿ ವಿಶೇಷ ಅತಿಥಿಗಳಾಗಿ ಹಾಗೇ ಉದ್ಘಾಟಕರಾಗಿ ಗೌರವಾನ್ವಿತ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ ಅವರು ಆಗಮಿಸಲಿದ್ದಾರೆ

ಇದರೊಂದಿಗೆ ಕಾರ್ಯಾಗಾರ, ಕಾರ್ಯಕಾರಣಿ ಸಭೆ ಹಾಗೂ ರಾಜ್ಯ ಮಟ್ಟದ ಮಾತೇ ಸಾವಿತ್ರಿಭಾಯಿ ಫುಲೆ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು ಸಂಘದ ಸರ್ವ ಸದಸ್ಯರ ಪರವಾಗಿ ರಾಜ್ಯಾಧ್ಯಕ್ಷ ರಾದ ಶ್ರೀಮತಿ ಲತಾ ಎಸ್ ಮುಳ್ಳೂರ, ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಚ್ ಅವರು ಸಂಘದ ಸರ್ವ ಸದಸ್ಯರ ಪರವಾಗಿ ಸರ್ವರಿಗೂ ಸ್ವಾಗತ ಕೋರಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.