ACB ಬಲೆಗೆ ಬಿದ್ದ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಹಣ ಪಡೆಯುವಾಗ ಸಿಕ್ಕಿಬಿದ್ದ ವೈದ್ಯ…..

Suddi Sante Desk

ಕೋಲಾರ –

ಆಸ್ಪತ್ರೆಗೆ ವಸ್ತುಗಳನ್ನು ಸರಬರಾಜು ಮಾಡಿದ ಬಿಲ್ ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟಿದ್ದ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ರೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಕೋಲಾರ ದಲ್ಲಿ ನಡೆದಿದೆ.ಹೌದು ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಮತ್ತು ಆಡಳಿತಾಧಿಕಾರಿ ಲಂಚ ಸ್ವೀಕರಿಸು ವಾಗಲೇ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕೊರೋನಾ ವೇಳೆ ಆಸ್ಪತ್ರೆಗೆ ಪ್ಲೇಟ್,ಲೋಟ ಪೂರೈಕೆ ಮಾಡಿದ ಸರಬರಾಜುದಾರ ಕಿರಣ್ ಕುಮಾರ್ ಅವರಿಂದ ಬಿಲ್ ಮಂಜೂರಾತಿ ಮಾಡಲು 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ವಸ್ತುಗಳ ನ್ನು ಸರಬರಾಜು ಮಾಡಿದ್ದ ಕಿರಣ್ ಕುಮಾರ್ ರಿಗೆ ಬಿಲ್ ನೀಡಲು ಇವರ ಬಳಿ ಹಣದ ಬೇಡಿಕೆಯನ್ನು ಇಟ್ಟಿದ್ದರು ಈ ಒಂದು ವಿಚಾರ ಕುರಿತು ಎಸಿಬಿ ಅಧಿಕಾರಿಗಳಿಗೆ ದೂರನ್ನು ನೀಡಿದ್ದರು ಅವರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.25,000 ರೂಪಾಯಿ ಸ್ವೀಕರಿಸುತ್ತಿದ್ದ ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಮತ್ತು ಮುಖ್ಯ ಆಡಳಿತಾಧಿಕಾರಿ ಅವರು ಎಸಿಬಿ ಬಲೆಗೆ ಬಿದ್ದಿದ್ದಾರೆ ಸಧ್ಯ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿರುವ ಎಸಿಬಿ ಅಧಿಕಾರಿಗಳು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.