ವರ್ಗಾವಣೆ ಸುದ್ದಿ ಕೇಳಿ ಮೃತಪಟ್ಟ ಶಿಕ್ಷಕ – ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಬಾನೋತ್…..

Suddi Sante Desk

ತೆಲಂಗಾಣ –

ವರ್ಗಾವಣೆಯಾದ ಸುದ್ದಿ ಕೇಳುತ್ತಿದ್ದಂತೆ ಶಿಕ್ಷಕರೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ತೆಲಂಗಾಣದ ಮೆಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ.ಬಾನೋತ್ ಜೆತ್ರಾ (57) ಮೃತ ಶಿಕ್ಷಕ. ಮೆಹಬೂಬಾಬಾದ್ ಜಿಲ್ಲೆಯ ನೆಲ್ಲಿಕುದುರು ಮಂಡಲದ ಚಿನ್ನ ಮುಪ್ಪರಂ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ತಮಗೆ ಈ ಶಾಲೆಯಿಂದ ಬೇರೆ ಶಾಲೆಗೆ ವರ್ಗಾವಣೆ ಯಾಗಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಶಾಕ್ ಆದ ಶಿಕ್ಷಕ ಚಿಂತಿತರಾಗಿದ್ದರು.ಚಿನ್ನ ಮುಪ್ಪರಂನಿಂದ ಮುಲುಗು ಜಿಲ್ಲೆಯಲ್ಲಿರುವ ಶಾಲೆಗೆ ಪ್ರತಿದಿನ ಪ್ರಯಾಣಮಾಡುವುದು ದುಸ್ಥರವಾಗಿತ್ತು.ಇದರಿಂದ ಬೇಸರಗೊಂಡಿದ್ದ ಜೇತ್ರಾ ತಡ ರಾತ್ರಿ ಹೃದಯಾಘಾತಕ್ಕೀಡಾಗಿದ್ದರು.ಕೋಮಾ ಸ್ಥಿತಿಗೆ ಜಾರಿದ್ದ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾ ಗಿತ್ತು.ಇದೀಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.