ಕರೋನ ಆತಂಕದಲ್ಲಿ ಶಾಲೆಗಳ ಕುರಿತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದೇನು ಗೊತ್ತಾ ಪಾಸಿಟಿವಿಟಿ ಹೆಚ್ಚಾದರೆ ಇತರೆ ತರಗತಿಗಳು ಕ್ಲೋಸ್ ಅನಿವಾರ್ಯ ಎಂದರು ಸಚಿವರು…..

Suddi Sante Desk

ಬೆಂಗಳೂರು –

ಪಾಸಿಟಿವಿಟಿ ಪ್ರಮಾಣ ಹೆಚ್ಚಾದರೆ ಇತರ ತರಗತಿಗಳನ್ನು ಬಂದ್ ಮಾಡಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು ಬೆಂಗಳೂರಿ ನಲ್ಲಿ ಮಾತನಾಡಿದ ಅವರು ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳದೊಂದಿಗೆ 10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪೋಷಕರು ತಮ್ಮ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಆತಂಕದಲ್ಲಿದ್ದಾರೆ.ಆದಾಗ್ಯೂ ಈ ತರಗತಿ ಗಳಿಗೆ ಆಫ್ ಲೈನ್ ಪಾಠಗಳು ಮುಂದುವರೆಯಲಿದೆ ಎಂದರು

ಇನ್ನೂ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯ ಬೇಕಾಗಿರುವುದರಿಂದ ತರಗತಿಗಳನ್ನು ಮುಚ್ಚುವ ಯಾವುದೇ ಯೋಜನೆ ಇಲ್ಲ ಎಂದು ಇದಲ್ಲದೆ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ಪ್ರೋತ್ಸಾಹಿಸಲು ಶಾಲೆಗಳನ್ನು ತೆರೆಯಲಾಗಿದೆ ಎಂದರು ಹಲವಾರು ಮಕ್ಕಳು ತಮ್ಮ ಮೊದಲ ಡೋಸ್ ಲಸಿಕೆ ಪಡೆದಿದ್ದರೂ ಪೋಷಕರು ಅವರನ್ನು ಶಾಲೆಗೆ ಕಳುಹಿಸಲು ಜಾಗರೂಕರಾಗಿದ್ದಾರೆ.ಪೋಷಕರು ದೃಷ್ಟಿಯಲ್ಲಿ ಇದು ಲಸಿಕೆ ವೇಗವನ್ನು ಹೆಚ್ಚಿಸುವ ಗೇಮ್ ಪ್ಲಾನ್ ಆಗಿದೆ. ಸಂಪೂರ್ಣ ಲಸಿಕೆ ಹಾಕಿಸಿಕೊಂಡಿರುವ ವೃತ್ತಿಪರರು ಹಾಗೂ ಕೆಲಸ ಮಾಡುವವರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿರುವಾಗ ಲಸಿಕೆ ಹಾಕಿಸಿಕೊಳ್ಳದ ಮಕ್ಕಳು ತರಗತಿಗೆ ಹಾಜರಾಗಲು ಹೇಗೆ ಅವಕಾಶ ಮಾಡಿ ಕೊಡಲಾಗಿದೆ.ಇದು ಮಕ್ಕಳನ್ನು ಅಪಾಯಕ್ಕೆ ಸಿಲುಕಿಸುವು ದರಲ್ಲಿ ಅರ್ಥವಿಲ್ಲ ಎಂಬ ಮಾತುಗಳು ಕೇಳಿ ಬಂದವು ಇದರ ನಡುವೆ ಪಾಸಿಟಿವಿಟಿ ಪ್ರಮಾಣ ಹೆಚ್ಚಾದರೆ ಇತರ ತರಗತಿಗಳಿಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಸಚಿವರು ಪ್ರಕಟಿಸಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.