ಚುಚ್ಚು ಮದ್ದು ಪಡೆದಿದ್ದ ಮೂವರು ಮಕ್ಕಳು ಸಾವು – ರಾಜ್ಯದಲ್ಲಿ ಸಂಚಲನವನ್ನು ಉಂಟುಮಾಡಿದೆ ಪ್ರಕರಣ…..

Suddi Sante Desk

ಬೆಳಗಾವಿ –

ಇತ್ತೀಚಿಗೆ ಅಷ್ಟೇ ರುಬೆಲ್ಲಾ ಚುಚ್ಚು ಮದ್ದು ಪಡೆದುಕೊಂಡಿ ದ್ದ ಮೂವರು ಮಕ್ಕಳು ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹೌದು ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಒಂದು ಘಟನೆ ನಡೆದಿದೆ.ಈ ಒಂದು ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಅಘಾತಕಾರಿ ಘಟನೆ ನಡೆದಿದ್ದು, ಮೈಲಿ ಬೇನೆಯ ನಿಯಂತ್ರಣಕ್ಕೆ ನೀಡುವ ರೂಬೆಲ್ಲಾ ಚುಚ್ಚುಮದ್ದು ಪಡೆದ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ

ಬೆಳಗಾವಿಯ ರಾಮದುರ್ಗ ತಾಲೂಕಿನ 13 ತಿಂಗಳ ಪವಿತ್ರಾ ಹುಲಗುರ್,ಒಂದು ವರ್ಷ ಎರಡು ತಿಂಗಳ ಮಧು ಉಮೇಶ್ ಕುರಗಂದಿ ಹಾಗೂ ಒಂದೂವರೆ ವರ್ಷದ ಚೇತನಾ ಪೂಜಾರಿ ಎಂಬ ಹಸುಗೂಸುಗಳು ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ಈ ಮೂವರು ಮಕ್ಕಳು ಐಸಿಯುನಲ್ಲಿ ಆಮ್ಲಜನಕದ ಸಪೋರ್ಟ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು.ಆದ್ರೆ ಇಂದು ಚಿಕಿತ್ಸೆ ಫಲಕಾ ರಿಯಾಗದೇ ಮಕ್ಕಳು ಹಸುಗುಸುಗಳು ಅಸುನೀಗಿವೆ.

ಜನವರಿ 11 ಮತ್ತು 12 ರಂದು ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಟ್ಟು 25 ಮಕ್ಕಳಿಗೆ ರೂಬೆಲ್ಲಾ ಲಸಿಕೆ ಹಾಕಲಾಗಿದ್ದು ಇದರಲ್ಲಿ 6 ಮಕ್ಕಳಿಗೆ ರೂಬೆಲ್ಲಾ ಚುಚ್ಚುಮದ್ದು ನೀಡಿದ್ದರು ಸಧ್ಯ ಈ ಚಚ್ಚು ಮದ್ದು ಪಡೆದ ಮಕ್ಕಳಲ್ಲಿ ಮೂರು ಮಕ್ಕಳು ಮೃತಪಟ್ಟಿದ್ದು ಇನ್ನೊಂದು ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಇನ್ನೂ ಈ ಒಂದು ವಿಚಾರ ಕುರಿತು DHO ಹೇಳೊದು ಹೀಗೆ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ರಾಮದುರ್ಗ ತಾಲೂಕು ವೈದ್ಯಾಧಿಕಾರಿ ಡಾ. ಸತೀಶ್ ಪೋತದಾರ್ ಇಡೀ ತಾಲೂಕಿ ನಾದ್ಯಂತ ಎಲ್ಲಾ ಪಿಎಚ್‌ಸಿಗಳಲ್ಲಿ ಮಕ್ಕಳಿಗೆ ವಿವಿಧ ಲಸಿಕೆ ಗಳನ್ನ ನೀಡಲಾಗುತ್ತಿದೆ.ಆದ್ರೆ ಸಾಲಹಳ್ಳಿ ಪಿಎಚ್‌ಸಿಯಲ್ಲಿ ಮಾತ್ರ ಇಂಥಹ ದುರ್ಘಟನೆ ನಡೆದಿದೆ.

ಈ ಮಕ್ಕಳಿಗೆ ನೀಡಿದ ರೂಬೆಲ್ಲಾ ಚುಚ್ಚು ಮದ್ದಿನ ಮಾದರಿ ಯನ್ನ ಪರೀಕ್ಷೆಗೆ ಕಳುಹಿಸಲಾಗಿದೆ.ಇನ್ನು ಒಂದು ಮಗುವಿನ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು ಆ ಮಾದರಿಯನ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ಆ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ಸ್ಪಷ್ಟವಾ ಗಲಿದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.