ಬಜೆಟ್ ನಂತರವೂ ವೇತನ ಆಯೋಗ ರಚನೆ ಮಾಡಬಹುದು ನೌಕರರಿಗೆ ಆತಂಕಬೇಡ ಶೀಘ್ರದಲ್ಲಿ ಸಿಗಲಿದೆ ವೇತನ ಆಯೋಗದ ರಚನೆಯ ಸಿಹಿ ಸುದ್ದಿ

Suddi Sante Desk

ಶಿವಮೊಗ್ಗ –

ಬಜೆಟ್ ನಂತರವೂ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಕುರಿತಂತೆ ಆಯೋಗ ರಚನೆ ಮಾಡಲು ಅವಕಾಶ ವಿದ್ದು ಈ ಕುರಿತಂತೆ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆಂ ದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಹೇಳಿದರು. ಶಿವಮೊಗ್ಗದಲ್ಲಿ ಮಾತನಾ ಡಿದ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಇದನ್ನು ಶೀಘ್ರದಲ್ಲೇ ಈಡೇರಿಸುವು ದಾಗಿ ಹೇಳಿದ್ದಾರೆಂದರು.

ಇನ್ನೂ ಈ ಒಂದು ವಿಚಾರ ಕುರಿತಂತೆ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಮಾಡಲಾಯಿತು.ಇಂದಿನಿಂದ ಬಜೆಟ್ ಮೇಲೆ ಚರ್ಚೆ ಆರಂಭವಾಗಲಿದ್ದು 7 ನೇ ವೇತನ ಆಯೋಗ ರಚಿಸುವ ಕುರಿತು ಘೋಷಣೆ ಮಾಡದ ಬಗ್ಗೆ ಸರ್ಕಾರಿ ನೌಕರರಿಂದ ಅಸಮಾಧಾನ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ನೌಕರರ ಸಂಘದಿಂದ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಚರ್ಚೆ ಮಾಡಿ ಜಾರಿ ಮಾಡುವಂತೆ ಒತ್ತಾ ಯವನ್ನು ಮಾಡಲಾಯಿತು.ಇನ್ನೂ ಸಿಎಂ ಬಸವರಾಜ ಬೊಮ್ಮಾಯಿ ಅವರು, ಬಜೆಟ್ ನಂತರವೂ ವೇತನ ಆಯೋಗ ರಚನೆಗೆ ಅವಕಾಶವಿದ್ದು ನೌಕರರಿಗೆ ಆತಂಕ ಬೇಡ.7ನೇ ವೇತನ ಆಯೋಗ ರಚನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರು ಯಾವುದೇ ಆತಂಕ ಪಡದಂತೆ ಹೇಳಿದರು..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.