ACB ಬಲೆಗೆ ಬಿದ್ದ PDO ಮತ್ತು ಕಂಪ್ಯೂಟರ್ ಆಪರೇಟರ್ ಒಂದು ವರ್ಷ ಸತಾಯಿಸಿ ಸತಾಯಿಸಿ ಬಲೆಗೆ ಬಿದ್ದ ಇಬ್ಬರು…..

Suddi Sante Desk

ಚಿತ್ರದುರ್ಗ –

ಇ ಸ್ವತ್ತು ಮಾಡಿಸಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಹಿಳಾ ಪಿಡಿಓ ಮತ್ತು ಕಂಪ್ಯೂಟರ್ ಆಪರೇಟರ್ ರೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಹೌದು ಚಿತ್ರದುರ್ಗ ಜಿಲ್ಲೆಯ ಮದಕರಿಪುರ ಗ್ರಾಮ ಪಂಚಾಯತಿ ಪಿಡಿಒ ಸುಷ್ಮಾರಾಣಿ ಮತ್ತು ಕಂಪ್ಯೂ ಟರ್ ಆಪರೇಟರ್ ಜಯಲಕ್ಷ್ಮಿ ಬಲೆಗೆ ಬಿದ್ದವರಾಗಿದ್ದಾರೆ. ಇವರಿಬ್ಬರು ಸುರೇಶ್ ಎಂಬುವರಿಗೆ ಇ ಸ್ವತ್ತು ಮಾಡಿಕೊ ಡಲು ಒಂದು ವರ್ಷ ಕಾಲ ಸತಾಯಿಸಿದ್ದರು.

ಆದರೆ ಇಂದು ಕೊನೆಗೂ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿ ದ್ದಾರೆ. ಸುಷ್ಮಾರಾಣಿ ಮತ್ತು ಜಯಲಕ್ಷ್ಮಿ ಅವರು. ಚಿತ್ರ ದುರ್ಗ ಜಿಲ್ಲೆಯ ಮದಕರಿಪುರ ಗ್ರಾಮ ಪಂಚಾಯತಿ ಪಿಡಿಒ ಸುಷ್ಮಾರಾಣಿ ಮತ್ತು ಕಂಪ್ಯೂಟರ್ ಆಪರೇಟರ್ ಜಯಲಕ್ಷ್ಮಿ ಬಂಧಿತ ಆರೋಪಿಗಳಾಗಿದ್ದಾರೆ.ಇವರು ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿ ದ್ದಾರೆ. ಸುರೇಶ್ ಎಂಬ ವ್ಯಕ್ತಿಯ ದೂರು ಆಧರಿಸಿ ಎಸಿಬಿ ಅಧಿಕಾರಿಗಳು ಈ ದಾಳಿಯನ್ನು ನಡೆಸಿದ್ದಾರೆ.ಸುರೇಶ್ ಇ-ಸ್ವತ್ತು ಮಾಡಿಸಿಕೊಡುವಂತೆ ಬರುತ್ತಿದ್ದರೂ ಇವರಿಬ್ಬರೂ ಅವರನ್ನು ಲಂಚಕ್ಕಾಗಿ ಪೀಡಿಸಿದ್ದರು.

ಹೀಗೆ ಒಂದೆರಡು ದಿನವಲ್ಲ, ಕಳೆದ ಒಂದು ವರ್ಷದಿಂದ ಇ-ಸ್ವತ್ತು ಮಾಡಿಕೊಡದೇ ಸತಾಯಿಸಿದ್ದರು.ಕೊನೆಗೂ ಬೇಸತ್ತ ಸುರೇಶ್ ಎಸಿಬಿಗೆ ದೂರು ನೀಡಿದ್ದರು.ಇಂದು ಎಸಿಬಿ ಡಿವೈಎಸ್ಪಿ ಪ್ರತಾಪ್ ರೆಡ್ಡಿ ಮತ್ತು ಸಿಪಿಐ ಪ್ರವೀಣ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಆರು ಸಾವಿರ ರೂ. ಲಂಚ ಸ್ವೀಕರಿಸುವಾಗ ಇವರಿಬ್ಬರನ್ನು ಹಿಡಿದಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.