ಬಜೆಟ್ ನಲ್ಲಿ OPS ಗೆ ಸಿಗದ ಭರವಸೆ ಹೋರಾಟಕ್ಕೆ ಸಿದ್ದರಾಗಿ ಎಂದರು ರಾಜ್ಯಾಧ್ಯಕ್ಷ ಶಾಂತಾರಾಮ್ – ಸರ್ಕಾರದ ಬಜೆಟ್ ಗೆ ಖಂಡನೆ ಶೀಘ್ರದಲ್ಲೇ ಹೋರಾಟದ ಎಚ್ಚರಿಕೆ…..

Suddi Sante Desk

ಬೆಂಗಳೂರು –

ನಿನ್ನೇಯಷ್ಟೇ ಮಂಡನೆಯಾದ ರಾಜ್ಯ ಸರ್ಕಾರದ ಬಜೆಟ್ ನ್ನು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿ‌ಎಸ್ ನೌಕರರ ಸಂಘವು ಖಂಡಿಸಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಬಾರಿ ಮಂಡಿಸಿರುವ 2022-23 ರ ಬಜೆಟ್ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿ‌ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾ ಮ ಖಂಡಿಸಿದ್ದು ರಾಜಸ್ಥಾನ ಸರ್ಕಾರ ತನ್ನ ಈ ಬಾರಿಯ ಬಜೆಟ್‌ನಲ್ಲಿ NPS ರದ್ದುಗೊಳಿಸಿರುವ ಮಾದರಿಯಲ್ಲಿ ಷೇರು ಮಾರುಕಟ್ಟೆ ಆಧಾರಿತ ನೂತನ ಪಿಂಚಣಿ ಯೋಜನೆ (NPS)ಯನ್ನು ನಮ್ಮ ಕರ್ನಾಟಕ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ರದ್ದುಗೊಳಿಸುವ ಭರವಸೆಯನ್ನು ಸಂಘ ಹೊಂದಿತ್ತು ಆದರೆ ಇದು ಹುಸಿಯಾಗಿದೆ

ಇತ್ತೀಚಿಗೆ ಅಷ್ಟೇ ರಾಜಸ್ಥಾನ ಸರ್ಕಾರ ತನ್ನ ಬಜೆಟ್‌ನಲ್ಲಿ NPS ರದ್ದುಗೊಳಿಸಿರುವ ಮಾದರಿಯಲ್ಲಿ ಷೇರು ಮಾರು ಕಟ್ಟೆ ಆಧಾರಿತ ನೂತನ ಪಿಂಚಣಿ ಯೋಜನೆ ಯನ್ನು ಜಾರಿಗೊಳಿಸಿದೆ ಇದೇ ಮಾದರಿಯಲ್ಲಿ ನಮ್ಮ ಕರ್ನಾಟಕ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ರದ್ದುಗೊಳಿಸುವ ಭರವಸೆಯನ್ನು ಸಂಘ ಹೊಂದಿತ್ತು ಅದರೆ ಈ ಒಂದು ಭರವಸೆ ಹುಸಿಯಾಗಿದ್ದು ಹೀಗಾಗಿ ಹೋರಾಟದ ಎಚ್ಚರಿಕೆ ಯನ್ನು ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ್ ಅವರು ನೀಡಿದ್ದಾರೆ

ಆದರೆ ಈ ಬಾರಿಯ ಬಜೆಟ್ 250,000 ಸರ್ಕಾರಿ ಹಾಗೂ ಬೋರ್ಡ್ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸು ತ್ತಿರುವ 3 ಲಕ್ಷಕ್ಕೂ ಅಧಿಕ NPS ನೌಕರರನ್ನು ನಮ್ಮ ಸರ್ಕಾರ ಬಜೆಟ್‌ನಲ್ಲಿ ನಿರಾಸೆಗೊಳಿಸಿದೆ.ಹೀಗಾಗಿ ಈ ಬಜೆಟ್ ಅನ್ನು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ತೀವ್ರವಾಗಿ ವಿರೋಧಿಸಿ ಅತಿ ಶೀಘ್ರದಲ್ಲಿ ಸರ್ಕಾರದ ಈ ವಿರೋಧ ನೀತಿಯ ಹೋರಾಟಕ್ಕೆ ಧುಮುಕಲಿದೆ ಎಂದು ಶಾಂತಾರಾಮ ಎಚ್ಚರಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.