ಬಿಜೆಪಿ ಯಿಂದ ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ಕಮಲ ಪಡೆಯಲ್ಲಿ ಹಬ್ಬದ ಹರ್ಷ…..

Suddi Sante Desk

ಹುಬ್ಬಳ್ಳಿ –

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹಿನ್ನೆಲೆ ಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಭ್ರಮಿಸಿದ ಕಮಲ ಪಡೆಯ ಕಾರ್ಯಕರ್ತರು,ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಇನ್ನೂ ಕೈಯಲ್ಲಿ ಕಮಲದ ಹೂ ಹಿಡಿದು ಮೋದಿಗೆ ಜೈಕಾರ ಕೂಗುವ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದರು.ಜಿಲ್ಲಾಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ ಈ ಒಂದು ವಿಜಯೋತ್ಸವ ನಡೆಯಿತು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.