ಸರ್ಕಾರಿ ನೌಕರರಿಗೆ ವರ್ಗಾವಣೆ ವಿಚಾರದಲ್ಲಿ ಗುಡ್ ನ್ಯೂಸ್ ನೀಡಿದ CM – ಇನ್ನೂ ಮುಂದೆ ಸಾಮಾನ್ಯ ವರ್ಗಾವಣೆ ಸಚಿವರ ಹೆಗಲಿಗೆ…..

Suddi Sante Desk

ಬೆಂಗಳೂರು –

ವರ್ಗಾವಣೆ ವಿಚಾರದಲ್ಲಿ ಸರ್ಕಾರಿ ನೌಕರರಿಗೆ ದೊಡ್ಡ ತಲೆನೋವಿನ ಕೆಲಸವಾಗಿದ್ದ ವರ್ಗಾವಣೆ ಪ್ರಕ್ರಿಯೆ ಸರಳ ಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ ಹೌದು ಮುಂಬರುವ ಏಪ್ರಿಲ್ ನಿಂದ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ.ಈ ಪ್ರಕ್ರಿಯೆಯನ್ನು ಕೈಗೊಳ್ಳುವ ಅಧಿಕಾರ ವನ್ನು ಆಯಾ ಇಲಾಖೆಯ ಸಚಿವರಿಗೆ ವಹಿಸೋದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ.

ಈ ಸಂಬಂಧ ಸಿಎಂ ಬೊಮ್ಮಾಯಿ ಸಂಪುಟದ ಸಚಿವರು ಆಗ್ರಹಿಸಿದ್ದರು.ಅವರ ಆಗ್ರಹಕ್ಕೆ ಸ್ಪಂದಿಸಿ ಸಿಎಂ ಈಗ ನೌಕರರ ಸಾಮಾನ್ಯ ವರ್ಗಾವಣೆ ಅಧಿಕಾರವನ್ನು ಇನ್ನೂ ಸಚಿವರ ಹೆಗಲಿಗೆ ವಹಿಸೋದಕ್ಕೆ ಕ್ರಮ ಕೈಗೊಳ್ಳಲು ತೀರ್ಮಾನಿಸಿದ್ದಾರೆ.ಪ್ರತಿ ವರ್ಷ ಹೊಸ ಆರ್ಥಿಕ ವರ್ಷಾ ರಂಭದಲ್ಲಿ ನಿರ್ಧಿಷ್ಟ ಮಿತಿಗೆ ಒಳಪಟ್ಟು ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತದೆ. ಈ ಪ್ರಕ್ರಿಯೆಯು ಬಹುತೇಕ ಸಿಎಂ ಕಾರ್ಯಾಲಯದ ಉಸ್ತುವಾರಿಯಲ್ಲೇ ನಡೆಯುವುದು ಪದ್ಧತಿಯಾಗಿದ್ದು ಇನ್ನೂ ಮುಂದೆ ಸಚಿವರ ಹೆಗಲಿಗೆ ಬರಲಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.