ಪ್ರೀಯಕರನ ಮದುವೆ ದಿನವೇ ಉಪನ್ಯಾಸಕಿ ಆತ್ಮಹತ್ಯೆ ಮನೆಯ ಮುಂದೆ ಗಲಾಟೆ ದೂರು ದಾಖಲು

Suddi Sante Desk

ಶಿವಮೊಗ್ಗ –

ಹೌದು ಶಿವಮೊಗ್ಗದ ನಗರದ ಸಹ್ಯಾದ್ರಿ ಕಾಲೇಜಿನ ಅತಿಥಿ ಉಪನ್ಯಾಸಕಿಯೊಬ್ಬರು ಪ್ರೇಮ ವೈಫಲ್ಯದಿಂದ ಮನ ನೊಂದು ತನ್ನ ಪ್ರಿಯಕರ ಮದುವೆಯಾದ ದಿನವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ತಮ್ಮ ಮನೆಯ ಬೆಡ್‌ರೂಮ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಸಹ್ಯಾದ್ರಿ ಕಾಲೇಜಿ ನಲ್ಲಿ ಓದುತ್ತಿದ್ದಾಗಲೇ ಆಕೆಗೆ ವಿನೋಬನಗರದ ನಿವಾಸಿ ಯಾದ ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆದಿತ್ತು. ಆನಂತರ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.ಬಳಿಕ ವೈಮನಸ್ಸು ಉಂಟಾಗಿತ್ತು.

ನಂತರ ಪ್ರಿಯಕರನಿಗೆ ಐದು ತಿಂಗಳ ಹಿಂದಷ್ಟೇ ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಕಾಯಂ ಉಪನ್ಯಾಸಕ ಹುದ್ದೆ ಸಿಕ್ಕಿತ್ತು.ಭಾನುವಾರ ಪ್ರಿಯಕರನ ಮದುವೆ ನಡೆದಿತ್ತು.ಇದರಿಂದ ಮನನೊಂದು ಆಕೆ ನೇಣು ಬಿಗಿದು ಕೊಂಡಿದ್ದಾರೆ.ಪ್ರಿಯಕರನ ಮನೆ ಮುಂದೆ ಗಲಾಟೆಯಾಗಿದೆ ಹೌದು ಪ್ರಿಯಕರನಿಗೆ ಕುವೆಂಪು ವಿವಿಯ ಪ್ರಾಧ್ಯಾಪಕಿಯೊ ಬ್ಬರ ಪುತ್ರಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು.ಈ ವಿಷಯ ತಿಳಿದ ಆಕೆ ಪ್ರಿಯಕರನ ಮನೆಗೆ ಹೋಗಿ ಗಲಾಟೆ ಮಾಡಿದ್ದರು.

ಆದರೂ ಪ್ರಿಯಕರ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದ.ಶನಿವಾರ ರಾತ್ರಿ ಪ್ರಿಯಕರನ ಮದುವೆ ಆರತಕ್ಷತೆ ನೆರವೇರಿತ್ತು.ಇದರಿಂದ ರಾತ್ರಿಯಿಂದಲೇ ಮಾನಸಿಕವಾಗಿ ನೊಂದಿದ್ದ ಆಕೆ ಭಾನುವಾರ ಬೆಳಗ್ಗೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿ ಸಿಕೊಂಡಿರುವ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.