ಒರ್ವ ವಿದ್ಯಾರ್ಥಿಗೆ ಕಾದು ಕುಳಿತ 10 ಕ್ಕೂ ಹೆಚ್ಚ ಶಿಕ್ಷಕರು ಸಿಬ್ಬಂದಿ ಗಳು SSLC ಪರೀಕ್ಷೆಯಲ್ಲಿ ವಿದ್ಯಾರ್ಥಿಗಾಗಿ ಕಾದು ಕಾದು ಕುಳಿತರು ಬಾರದ ವಿದ್ಯಾರ್ಥಿ…..

Suddi Sante Desk

ಕೊಪ್ಪಳ –

ಎಸ್‌ಎಸ್‌ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರ ವೊಂದರಲ್ಲಿ ಓರ್ವ ವಿದ್ಯಾರ್ಥಿಗಾಗಿ ಸುಮಾರು 10ಕ್ಕೂ ಹೆಚ್ಚು ಶಿಕ್ಷಕರು ಮತ್ತು ಸಿಬ್ಬಂದಿಗಳು ಕಾದು ಕುಳಿತ ಘಟನೆ ಕೊಪ್ಪಳ ದಲ್ಲಿ ನಡೆದಿದೆ.ಹೌದು ವಿದ್ಯಾರ್ಥಿ ಪರೀಕ್ಷೆಗೆ ಗೈರಾ ಗಿದ್ದರಿಂದ ಸಿಬ್ಬಂದಿ ಕಾದು ಕುಳಿತರೂ ಪ್ರಯೋಜನವಾಗ ದಂತಾಗಿದೆ.ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮೆಹಬೂಬ್ ಹುಸೇನ್ ಎಂಬ ಒಬ್ಬನೇ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆಯ ಬೇಕಿತ್ತು.ಎಸ್‌ ಎಸ್‌ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು.ಈ ಓರ್ವ ವಿದ್ಯಾರ್ಥಿ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ಮುಖ್ಯ ಅಧೀಕ್ಷಕರು,ಪ್ರಶ್ನೆ ಪತ್ರಿಕೆ ಅಭಿರಕ್ಷಕರು,ಕೊಠಡಿ ಮೇಲ್ವಿಚಾರಕರು,ಕಚೇರಿ ಸಹಾ ಯಕರು,ಪರಿಚಾರಕರು,ಇಬ್ಬರು ಆಶಾ ಕಾರ್ಯಕರ್ತೆಯ ರು,ದೈಹಿಕ ಶಿಕ್ಷಕರು,ಓರ್ವ ಪೊಲೀಸ್ ಸಿಬ್ಬಂದಿ, ಓರ್ವ ಸ್ಥಾನಿಕ ಜಾಗೃತ ದಳದ ಅಧಿಕಾರಿ, 3 ಜನ ಫ್ಲೈಯಿಂಗ್ ಸ್ಕ್ವಾಡ್, ಮೂವರು ಮಾರ್ಗಾಧಿಕಾರಿಗಳು ಇಬ್ಬರು ಖಜಾನೆ ಅಧಿಕಾರಿಗಳ ಕಾರ್ಯನಿರ್ವಹಣೆ ಕಾರ್ಯನಿರ್ಹ ಣೆಗೆ ನಿಯೋಜನೆಗೊಂಡು ಕರ್ತವ್ಯದಲ್ಲಿ ನಿರತವಾಗಿದ್ದರು.

ಆದರೆ ಪರೀಕ್ಷೆ ಬರೆಯಬೇಕಿದ್ದ ವಿಶೇಷಚೇತನ ವಿದ್ಯಾರ್ಥಿ ಮೆಹಬೂಬ್ ಹುಸೇನ್ ಪರೀಕ್ಷಾ ಸಮಯವಾದರೂ ಬರಲಿಲ್ಲ. ಇದರಿಂದಾಗಿ ಸಿಬ್ಬಂದಿ ವಿದ್ಯಾರ್ಥಿಗಾಗಿ ಕಾದು ಕುಳಿತರು. ಆದರೆ ಆ ವಿದ್ಯಾರ್ಥಿ ಪರೀಕ್ಷೆಗೆ ಗೈರಾಗಿದ್ದು ಸಿಬ್ಬಂದಿ ಕಾದು ಕುಳಿತರೂ ಪ್ರಯೋಜನವಾಗಲಿಲ್ಲ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.