ಶಾಲೆಗೆ ಹೊರಟಿದ್ದ ಶಿಕ್ಷಕಿ ಯ ಮೇಲೆ ಅಟ್ಯಾಕ್ ಹಲ್ಲೆ ನಡೆಸಿ ಮಾಂಗಲ್ಯ ಸರ ದೋಚಿ ಎಸ್ಕೇಪ್ ಆದ ದುಷ್ಕರ್ಮಿಗಳು…..

Suddi Sante Desk

ಶಿವಮೊಗ್ಗ –

ಶಾಲೆಗೆ ಹೊರಟಿದ್ದ ಶಿಕ್ಷಕಿಯೊಬ್ಬರ ಮೇಲೆ ಹಲ್ಲೆ ನಡೆಸಿ ಮಾಂಗಲ್ಯಸರ ದೋಚಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ ಹೌದು ಜಿಲ್ಲೆಯ ಸಾಗರ ತಾಲ್ಲೂಕಿನ ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಬ್ರಾಹ್ಮಣ ಮಂಚಾಲೆ ತ್ರಾಲಯ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಸ್ ನಿಂದ ಇಳಿದು ಅರಣ್ಯ ಪ್ರದೇಶವನ್ನು ದಾಟಿ ಶಾಲೆ ಕಡೆಗೆ ತೆರಳುತ್ತಿದ್ದ ಸಂದರ್ಭ ದಲ್ಲಿ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಮಾಂಗಲ್ಯ ಸರ ದೋಚಿ ಪರಾರಿಯಾಗಿದ್ದಾನೆ. ಗಾಯಗೊಂಡ ಪ್ರಭಾವತಿ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗ್ರಾಮಾಂತರ ಠಾಣೆ ಪೊಲೀ ಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.