ಕೆರೆಯಲ್ಲಿ ವೈಧ್ಯೆಯ ಶವ ಪತ್ತೆ – ಸಾವಿನ ಹಿಂದೆ ಹುಟ್ಟಿಕೊಂಡಿವೆ ಹಲವು ಅನುಮಾನಗಳು…..

Suddi Sante Desk

ಸಾಗರ –

ವೈದ್ಯೆಯೊಬ್ಬರ ಮೃತದೇಹವೊಂದು ಕೆರೆಯಲ್ಲಿ ಪತ್ತೆಯಾದ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದೆ.ಇನ್ನೂ ಇದನ್ನು ನೋಡುತ್ತಿದ್ದರೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು ಜಂಬಗಾ ರಿನ ನಿವಾಸಿ ಡಾ.ಶರ್ಮದಾ(36) ಮೃತಪಟ್ಟ ವೈದ್ಯೆಯಾಗಿ ದ್ದಾರೆ.ಇವರು ಸೋಮವಾರ ರಾತ್ರಿ ತಮ್ಮ ಕ್ಲಿನಿಕ್ ಬಂದ್ ಮಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಹೊರಟವರು ತಡರಾ ತ್ರಿಯಾದರೂ ಮನೆ ತಲುಪಿರಲಿಲ್ಲ ಈ ಹಿನ್ನಲೆಯಲ್ಲಿ ಮನೆ ಮಂದಿ ಹುಡುಕಾಟ ನಡೆಸಿದಾಗ ಗಣಪತಿ ಕೆರೆ ಬಳಿ ಶರ್ಮದಾ ಅವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು.

ತಕ್ಷಣ ಕೆರೆಯಲ್ಲಿ ಶೋಧಕಾರ್ಯ ನಡೆಸಿದಾಗ ಶರ್ಮದಾ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶರ್ಮದಾ ಅವರ ವಿವಾಹವು ಭೀಮನಕೊಣೆ ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿರುವ ಸುನೀಲ್ ಎಂಬವರ ಜೊತೆ ಎಂಟು ವರ್ಷಗಳ ಹಿಂದೆ ನೆರವೇರಿತ್ತು.ಶರ್ಮದಾ ತಾಲೂಕು ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು.ಇವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.