ಶಿಕ್ಷಕ ಅಮಾನತು ಇಲಾಖೆಯ ಮೇಲಾಧಿಕಾರಿಗಳಿಂದ ಅಮಾನತು ಮಾಡಿ ಆದೇಶ…..

Suddi Sante Desk

ಕನ್ಯಾಕುಮಾರಿ

ಸರ್ಕಾರಿ ಶಾಲಾ ಶಿಕ್ಷಕರೊಬ್ಬರನ್ನು ಅಮಾನತು ಮಾಡಿರುವ ಘಟನೆ ತಮಿಳುನಾಡಿನ ಕನ್ನಟ್ಟುವಿಲೈ ನಲ್ಲಿ ನಡೆದಿದೆ ಹೌದು ಇಲ್ಲಿನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕರೊಬ್ಬರು ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಯತ್ನಿಸಿ ದ್ದಾರೆ ಎಂಬ ಆರೋಪ ಕೇಳಿಬಂದಿದೆ.ವಿದ್ಯಾರ್ಥಿಗಳು ಮತ್ತು ಪೋಷಕರ ದೂರಿನ ಆಧಾರದ ಮೇಲೆ ಟೈಲರಿಂಗ್ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

ಶಾಲೆಯಲ್ಲಿನ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯ ಟೈಲರಿಂಗ್ ಶಿಕ್ಷಕ ಟೈಲರಿಂಗ್ ತರಗತಿಗೆ ಹಾಜರಾಗುವಾಗ ತರಗತಿಯಲ್ಲಿದ್ದ ಹಿಂದೂ ವಿದ್ಯಾರ್ಥಿಗಳನ್ನು ಕ್ರಿಶ್ಚಿಯನ್ ಪ್ರಾರ್ಥನೆಗಳನ್ನು ಓದುವಂತೆ ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಇದರೊಂದಿಗೆ ಬೈಬಲ್ ಓದಲು ಹೇಳಿದರು ಎಂದು ವಿದ್ಯಾರ್ಥಿಯೊಬ್ಬರು ವಿವರಿಸಿದ್ದಾರೆ. ಇದಲ್ಲದೇ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದಂತೆ ಮಾಡುವಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಂಡಿಯೂರಿ ಪ್ರಾರ್ಥಿಸಲು ಕಲಿಸಿದರು.ಇದರಿಂದ ನೊಂದ ಹಿಂದೂ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದು ಕೊನೆಗೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪಾಲಕರು ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಿ ಅವರಿಗೂ ದೂರು ನೀಡಿದ್ದಾರೆ.ಹೀಗಾಗಿ ಅಧಿಕಾರಿಗಳು ಟೈಲರಿಂಗ್ ಶಿಕ್ಷಕನನ್ನು ಅಮಾನತುಗೊಳಿಸಿ ತನಿಖೆ ಆರಂಭಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.