ದಿಢೀರ್ ಮುಂದೂಡಿಕೆಯಾದ ರಾಜ್ಯ ಸಚಿವ ಸಂಪುಟದ ಸಭೆ ನಾಳೆ ನಡೆಯಬೇಕಾಗಿದ್ದ ಸಚಿವ ಸಂಪುಟ ಸಭೆ ಮೇ 11 ರಂದು…..

Suddi Sante Desk

ಬೆಂಗಳೂರು –

ನಾಳೆ ನಡೆಯಬೇಕಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಯನ್ನು ದಿಢೀರ್ ನೇ ಮುಂದೂಡಲಾಗಿದೆ.ಹೌದು ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಈ ಒಂದು ಬೆಳವಣಿಗೆಯ ಬೆನ್ನಲ್ಲೇ ನಾಳೆ ನಡೆಯಬೇಕಿದ್ದ ಸಂಪುಟ ಸಭೆ ಮುಂದೂಡಿಕೆಯಾಗಿರುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ನಾಳೆ ನಡೆಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮೇ 11ಕ್ಕೆ ಮುಂದೂಡಿ ಆದೇಶವನ್ನು ಮಾಡಲಾಗಿದೆ. ನಾಳೆ ಅಂದರೆ ಗುರುವಾರ ಬೆಳಿಗ್ಗೆ 11.30ಕ್ಕೆ ರಾಜ್ಯ ಸಂಪುಟ ಸಭೆ ನಿಗದಿಯಾಗಿತ್ತು.ಆದ್ರೆ ಈಗ ಅದನ್ನು ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ‌.

ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಂಬಂದ ಬಿಜೆಪಿಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಈ ಪ್ರಕ್ರಿಯೆ ಮುಗಿಸಿದ ನಂತರವೇ ಸಂಪುಟ ಸಭೆ ನಡೆಸಲು ನಿರ್ಧರಿಸಿ ದ್ದಾರೆ ಎನ್ನಲಾಗಿದೆ.ಮೇ 10ರೊಳಗೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯಲಿದೆ ಎಂದು ಹೇಳಲಾಗು ತ್ತಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.