ರಾಜ್ಯದ ಸರ್ಕಾರಿ ಶಾಲೆಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ CM – 1 ಲಕ್ಷ ಸಾವಿರ ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕೊಠಡಿಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ 6,500 ಕ್ಕೂ ಹೆಚ್ಚು ಕೊಠಡಿಗಳ ನಿರ್ಮಾಣ ಕಾರ್ಯವನ್ನು ಅಂದಾಜು 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.2022-23ನೇ ಸಾಲಿನ ಬಜೆಟ್‌ ಅನುಷ್ಠಾ ನಕ್ಕೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಶಿಕ್ಷಣ ಇಲಾಖೆ ಸಭೆಯಲ್ಲಿ ಸಿಎಂ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಕೊಠಡಿಗಳ ಸಂಖ್ಯೆ ಕಡಿಮೆ ಇದೆ ಇದ್ದರೂ ಅಚ್ಚು ಕಟ್ಟಾದ ಮತ್ತು ವ್ಯವಸ್ಥಿತ ಕೊಠಡಿಗಳ ಸಂಖ್ಯೆ ಕಡಿಮೆ ಇದೆ.ಹೀಗಾಗಿ ಸರಕಾರಿ ಶಾಲೆಗಳಲ್ಲಿ ಪೂರ್ಣಪ್ರಮಾಣದ ಮತ್ತು ಸುಸಜ್ಜಿತ ಕೊಠಡಿಗಳ ನಿರ್ಮಾಣ ಮಾಡುವಂತೆ ಸೂಚಿಸಿದರು

ಇನ್ನೂ ರಾಜ್ಯದ ಸರಕಾರಿ ಶಾಲೆಗಳಲ್ಲಿನ ಮೂಲ ಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ ಒದಗಿಸಲಾಗುವುದು. ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ.ಅನಂತರ ಎಸ್‌ಜಿಪಿ ಗೆ 2ನೇ ಆದ್ಯತೆ ಹಾಗೂ ನಾನ್‌ ಎಸ್‌ಜಿಪಿ ಗಳಿಗೆ 3 ನೇ ಆದ್ಯತೆ ನೀಡುವುದು.ಕೆಕೆಆರ್‌ಡಿಬಿ ವ್ಯಾಪ್ತಿಯಲ್ಲಿ 32 ಆಕಾಂಕ್ಷಿ ತಾಲೂಕುಗಳಿದ್ದು ಅವುಗಳ ಅಭಿವೃದ್ಧಿಗೆ ಆದ್ಯತೆ. ಕ್ಷೇತ್ರ ವಾರು ಅಭಿವೃದ್ಧಿಗೊಳಿಸುವ ಶಾಲೆಗಳ ಸಂಖ್ಯೆಯನ್ನು ನಿಗದಿಪಡಿಸಿ ಈ ಯೋಜನೆಯಡಿ ನಿರ್ಮಾಣವಾಗುವ ಶಾಲಾ ಕಟ್ಟಡಗಳು ಏಕರೂಪದ ಮಾದರಿ ಹಾಗೂ ಬಣ್ಣ ವನ್ನು ಹೊಂದಿರುವುದು ಹಾಗೂ ಈ ಕಟ್ಟಡಗಳಿಗೆ ಒಂದೇ ಹೆಸರು ಇಡುವಂತೆ ಅವರು ಸೂಚಿಸಿದರು ಇದರೊಂದಿಗೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಮತ್ತು ಮಕ್ಕ ಳಿಗೆ ಮುಖ್ಯಮಂತ್ರಿ ಭರ್ಜರಿ ಗುಡ್ ನ್ಯೂಸ್ ನೀಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.