ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಶಿಕ್ಷಕ ದಂಪತಿಗಳಿಬ್ಬರು ಸಾವು ರಸ್ತೆ ಬದಿ ನಿಂತುಕೊಂಡಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು…..

Suddi Sante Desk

ತುಮಕೂರು –

ರಸ್ತೆ ಬದಿ ನಿಂತಿದ್ದ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಶಿಕ್ಷಕ ದಂಪತಿಗಳಿಬ್ಬರು ದುರ್ಮರ ಣಕ್ಕೀಡಾದ ಘಟನೆ ತುಮಕೂರಿನ ಮಲ್ಲಸಂದ್ರ ಬಳಿ ನಡೆದಿದ್ದು ಭೀಕರ ಅಫಘಾತಕ್ಕೆ ಶಿಕ್ಷಕ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.ಗುಬ್ಬಿ ತಾಲೂಕಿನ ದಂಪತಿ ಈಶ್ವರಪ್ಪ (52) ಮತ್ತು ಕಲ್ಪನಾ(48) ಮೃತರಾಗಿರುವ ಶಿಕ್ಷಕ ದಂಪತಿಗಳಾಗಿದ್ದಾರೆ.

ದಂಪತಿ ಇಬ್ಬರೂ ಶಿಕ್ಷಕರಾಗಿದ್ದರು. ಗುಬ್ಬಿಯ ಖಾಸಗಿ ಶಾಲೆಯಲ್ಲಿ ಈಶ್ವರಪ್ಪ, ಗುಬ್ಬಿ ಸರ್ಕಾರಿ ಶಾಲೆಯಲ್ಲಿ ಕಲ್ಪನಾ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಇಂದು ದಂಪತಿ ಇಬ್ಬರೂ ಕಾರಿನಲ್ಲಿ ತುಮಕೂರು ಕಡೆಯಿಂದ ಗುಬ್ಬಿಗೆ ಹೋಗುತ್ತಿದ್ದರು ಮಾರ್ಗಮಧ್ಯೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಗಂಡ-ಹೆಂಡತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಂದ ತುಮಕೂರು ಗ್ರಾಮಾಂತರ ಠಾಣೆ ಪೊಲೀ ಸರು ಪರಶೀಲನೆ ಮಾಡಿ ಈ ಕುರಿತಂತೆ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದು ಮೃತದೇಹಗಳನ್ನು ಮರ ಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.