ಮದುವೆ ಖುಷಿಯಲ್ಲಿದ್ದ ಪ್ರೇಮಿಗಳಿಬ್ಬರು ಸಾವು ಅಪಘಾತ ದಲ್ಲಿ ಯುವಕ ಸಾವು ಸುದ್ದಿ ಕೇಳಿ ಆತ್ಮಹತ್ಯೆ ಮಾಡಿಕೊಂಡ ಯುವತಿ

Suddi Sante Desk

ತುಮಕೂರು –

ಇನ್ನೇನು ಒಂದೇ ವಾರ ಕಳೆದಿದ್ದರೆ ಆ ಇಬ್ಬರಿಗೂ ವಿವಾಹ ವಾಗಿ ಸಂಸಾರವನ್ನು ನಡೆಸುತ್ತಿದ್ದರು ಆದರೆ ಆಗಿದ್ದೇ ಬೇರೆ ಹೌದು ಅಪಘಾತದಲ್ಲಿ ಮದುವೆಯಾಗುವ ಯುವಕ ಮೃತಪಟ್ಟಿದ್ದು ಪ್ರಿಯತಮ ಸಾವನ್ನು ಅರಗಿಸಿಕೊಳ್ಳಲಾ ಗದೇ ಇತ್ತ ಪ್ರಿಯತಮೆ ಕೂಡಾ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.ಇಂಥಹದೊಂದು ಮನಕಲಕುವ ಘಟನೆ ತುಮಕೂ ರಿನ ಅರೆಹಳ್ಳಿಯಲ್ಲಿ ನಡೆದಿದೆ.ಇನ್ನೇನು ಕೆಲವೇ ದಿನಗಳಲ್ಲಿ ಇವರಿಬ್ಬರ ಮದುವೆಯಾಗುವುದರಲ್ಲಿತ್ತು.ಎರಡು ವರ್ಷಗ ಳಿಂದ ಪ್ರೀತಿಸಿ ಮದುವೆಗೆ ಮನೆಯವರನ್ನೂ ಒಪ್ಪಿಸಿದ್ದ ಜೋಡಿ ಬಾಳಲ್ಲಿ ಈಗ ಜವರಾಯ ಅಟ್ಟಹಾಸ ಮೆರೆದಿದ್ದಾ ನೆ.ಮೇ 11ರಂದು ಹುಡುಗ ಮೃತಪಟ್ಟಿದ್ದು 14ರಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಧನುಷ್ (23), ಸುಷ್ಮಾ (22) ಮೃತ ದುರ್ದೈವಿಗಳಾಗಿದ್ದಾರೆ.ಮೇ 11ರಂದು ನೆಲಮಂಗಲ ಕುಲಾನಹಳ್ಳಿ ಬಳಿ ನಡೆದ ಅಪಘಾತದಲ್ಲಿ ಧನುಷ್ ಮೃತಪಟ್ಟಿದ್ದ.

ಇವರು ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದವರು ಇತ್ತ ಈ ಒಂದು ಸಾವಿನ ಸುದ್ದಿಕೇಳಿ ಸುಷ್ಮಾ ಆಘಾತಗೊಂ ಡಿದ್ದಳು.ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾ ಗಿದ್ದರು ಕೂಡ.ಆದರೆ ಅಂದಿನಿಂದ ಸುಷ್ಮಾ ಧುನುಷ್ ಸಾವಿನ ಯೋಚನೆಯಲ್ಲಿಯೇ ದುಃಖಿಸುತ್ತಿದ್ದಳು.ಧನುಷ್ ಸಾವಿನಿಂದ ನೊಂದು ಈಗ ಆತ್ಮಹತ್ಯೆ ಹಾದಿ ತುಳಿದಿದ್ದಾಳೆ. ವಿಷ ಸೇವಿಸಿದ್ದ ಸುಷ್ಮಾಳನ್ನು ನಾಲ್ಕೈದು ಆಸ್ಪತ್ರೆಗಳಿಗೆ ಸೇರಿಸಲಾಯಿತಾದರೂ ಬದುಕಿ ಬರಲಿಲ್ಲ.ಧನುಷ್‌ ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರೆ ಈಕೆ ಎಂಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಳು. ಊರಿನ ಜಾತ್ರೆಗೆ ಬರುವ ವೇಳೆ ಅಪಘಾತ ನಡೆದು ಧನುಷ್ ಸ್ಥಳ ದಲ್ಲೇ ಸಾವನ್ನಪ್ಪಿದ್ದ. ಹೆಬ್ಬೂರು‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.