ರಾಜ್ಯದಲ್ಲಿ ಮತ್ತೊಂದು ಅಪಘಾತಕ್ಕೆ ವಿದ್ಯಾರ್ಥಿನಿ ಬಲಿ ಬೈಕ್ ನಲ್ಲಿ ಹೊರಟಿದ್ದವರಿಗೆ ಡಿಕ್ಕಿ ಹೊಡೆದ ಲಾರಿ…..

Suddi Sante Desk

ಬೆಂಗಳೂರು –

ಶಾಲಾ ಬಸ್ ಹರಿದು ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೌದು ನಗರದ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಈ ಒಂದು ಘಟನೆ ನಡೆದಿದೆ.ಹಾರೋಹಳ್ಳಿಯ ನಿವಾಸಿ ಕೀರ್ತನಾ(16)ಮೃತ ದುರ್ದೈವಿಯಾಗಿದ್ದಾರೆ.ಬೈಕ್ ನಲ್ಲಿ ಹರ್ಷಿತಾ ಮತ್ತು ಮೃತ ಕೀರ್ತನಾ ಬರುತ್ತಿದ್ದರು.ಆಗ ಹಿಂದಿನಿಂದ ಬಂದ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿತ್ತು.

ಕೆಳಗೆ ಬಿದ್ದ ಬಾಲಕಿ ಕೀರ್ತನಾ ಮೇಲೆ ಶಾಲಾ ಬಸ್ ಹರಿದಿದೆ.ಕೀರ್ತನಾಳನ್ನ ಹಿಂದೆ ಕೂರಿಸಿಕೊಂಡು ಹೋಗ್ತಿದ್ದ ಅಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂ ರಿನ ಕಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಕೀರ್ತನಾ ಮೃತದೇಹ ವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.ಮಗಳನ್ನು ನೆನೆದು ಕೀರ್ತನಾ ತಾಯಿ ಬಿಕ್ಕಿಬಿಕ್ಕಿ ಅಳುತ್ತಿದ್ದು ಕಿಮ್ಸ್ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.