ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಗಾಗಿ ಜೂನ್ 27 ರಂದು CM ಮನೆಯ ಮುಂದೆ ಹೋರಾಟ – ಬಸವ ಜಯ ಮೃತ್ಯುಂಜಯ ಸ್ವಾಮಿಜಿ, ಮಾಜಿ ಸಚಿವ ವಿನಯ ಕುಲಕರ್ಣಿ ಉಪಸ್ಥಿತಿ…..

Suddi Sante Desk

ಬೆಳಗಾವಿ-

ಪಂಚಮಸಾಲಿ ಸಮಾಜದ ಏಳಿಗೆಗಾಗಿ ಹೋರಾಟ ಮಾಡಲು ಮತ್ತೆ ವೇದಿಕೆಯವರು ಸಜ್ಜಾಗುತ್ತಿದ್ದಾರೆ ಹೌದು

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ನಗರದಲ್ಲಿ ಸಭೆ ನಡೆಯಿತು ನಗರದಲ್ಲಿ ನಡೆದ ಈ ಒಂದು ಸಭೆಯಲ್ಲಿ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾ ಸ್ವಾಮಿಗಳ ನೇತೃತ್ವ ದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿಗಾಗಿ ವಿಳಂಬ ಮಾಡುತ್ತಿರುವ ಸರ್ಕಾರದ ವಿರುದ್ಧ ಬರುವ 27 ರಂದು ಮುಖ್ಯಮಂತ್ರಿಯವರ ಗೃಹ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ಕುರಿತು ಬೆಳಗಾವಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು

ಇನ್ನೂ ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ,ಎ ಬಿ ಪಾಟೀಲ,ಆರ್ ಕೆ ಪಾಟೀಲ,ಚನ್ನರಾಜ ಹಟ್ಟಿಹೋಳಿ ಹಾಗೂ ವಿವಿಧ ಜಿಲ್ಲಾವಾರು ಪಂಚಮಸಾಲಿ ಮುಖಂಡರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.