ಡಿ ಕೆ ಶಿವಕುಮಾರ್ ವಿರುದ್ಧವೇ ಹೈ ಕಮಾಂಡ್‌ ಗೆ ದೂರು ನೀಡಿದ ಜಮೀರ್ – ರಾಜ್ಯದ ಉಸ್ತುವಾರಿ ಗೆ ದೂರು ಸಲ್ಲಿಕೆ…..

Suddi Sante Desk

ಬೆಂಗಳೂರು

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆ ಹೈಕಮಾಂಡ್‌ಗೆ ತಲುಪಿದ ಬೆನ್ನಲ್ಲೇ ಈಗ ಮಾಜಿ ಸಚಿವ ಜಮೀರ್‌ ಅಹಮದ್‌ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ವಿರುದ್ಧವೇ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲರಿಗೆ ದೂರು ನೀಡಿದ್ದಾರೆ.

ಹೌದು ಸಿದ್ದರಾಮಯ್ಯ ಹುಟ್ಟುಹಬ್ಬ ವಿಚಾರದಲ್ಲಿ ನಾನು ರಾಜ್ಯವ್ಯಾಪಿ ಪ್ರವಾಸ ಮಾಡಿ ಮುಸ್ಲಿಮರನ್ನು ಕಾಂಗ್ರೆಸ್‌ ಪರವಾಗಿ ಒಟ್ಟು ಸೇರಿಸುತ್ತಿದ್ದೇನೆ.ವೈಯಕ್ತಿಕ ಅಭಿಪ್ರಾಯ ವಾಗಿ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಲಿ ಎಂದಿದ್ದನ್ನೇ ಮುಂದಿಟ್ಟು ನನ್ನನ್ನು ವಿಲನ್‌ನಂತೆ ಬಿಂಬಿಸ ಲಾಗಿದೆ.ಇದರಿಂದ ನನ್ನ ಸಮುದಾಯಕ್ಕೆ ಉತ್ತರಿಸುವುದು ಕಷ್ಟವಾಗುತ್ತಿದೆ ಎಂದು ಸುರ್ಜೇವಾಲರಲ್ಲಿ ಬೇಸರ ತೋಡಿ ಕೊಂಡಿದ್ದಾರೆ.

ಸದ್ಯ ಅಮೆರಿಕದಲ್ಲಿರುವ ಸುರ್ಜೇವಾಲರಿಗೆ ಜಮೀರ್‌ ದೂರವಾಣಿ ಮೂಲಕ ಈ ವಿಷಯ ತಿಳಿಸಿದ್ದಾರೆ.ಒಕ್ಕಲಿಗ ರಿಗೂ ಮುಂದಿನ ಮುಖ್ಯಮಂತ್ರಿ ಆಗುವ ಅವಕಾಶ ಇದೆ ಎಂದು ಹೇಳಿ ವಿಷಯ ಪ್ರಾರಂಭಿಸಿದವರೇ ಶಿವಕುಮಾರ್‌ ನಾನು ನಮ್ಮ ಸಮುದಾಯದ ಜನಸಂಖ್ಯೆಯೂ ಇದೆ ಮುಸ್ಲಿಮರು ಮುಖ್ಯಮಂತ್ರಿ ಸ್ಥಾನ ಕೇಳಬಹುದು. ಅದರಲ್ಲಿ ತಪ್ಪೇನು ಎಂದಿದ್ದೆ.ಅದನ್ನೇ ಮುಂದಿಟ್ಟು ಪಕ್ಷದ ನಾಯಕರೇ ನನ್ನನ್ನು ಒಕ್ಕಲಿಗ ವಿರೋಧಿ ಎಂಬಂತೆ ಬಿಂಬಿಸಿ ಪ್ರತಿಭಟನೆ ಮಾಡಿಸಿದ್ದಾರೆ.ಇದಕ್ಕೆ ನನ್ನಲ್ಲಿ ದಾಖಲೆಯೂ ಇದೆ ಎಂದಿದ್ದಾರೆ.

ಅದಕ್ಕೆ ನಾನು ದೇಶಕ್ಕೆ ಹಿಂದಿರುಗುವವರೆಗೆ ಏನೂ ಮಾತನಾಡಬೇಡಿ.ನಾನು ಕೆಪಿಸಿಸಿ ಅಧ್ಯಕ್ಷರ ಜೊತೆಗೂ ಮಾತನಾಡುತ್ತೇನೆ.ಮುಖ್ಯಮಂತ್ರಿ ಮಾತು ಈಗ ಬೇಡ ಎಂದು ಸುಜೇವಾಲಾ ಹೇಳಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.