ಬೆಳಿಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಲು ರಾಜ್ಯ ಸರ್ಕಾರಿ ನೌಕರರಿಗೆ ಸೂಚನೆ ಬೆಳಿಗ್ಗೆ ಯಿಂದ ಅವಧಿ ಪೂರ್ಣ ಕಚೇರಿಯಲ್ಲಿ ಕರ್ತವ್ಯ ನಿರ್ವಹಣೆಗೆ CS ಸೂಚನೆ

Suddi Sante Desk

ಬೆಂಗಳೂರು –

ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಖಡಕ್ ಸಂದೇಶವನ್ನು ನೀಡಿದ್ದಾರೆ ಹೌದು ಬೆಳಗ್ಗೆ ಹತ್ತು ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾ ಗಬೇಕು ಹಾಗೂ ಕಚೇರಿ ಅವಧಿ ಪೂರ್ಣವಾಗುವರೆಗೆ ‌ನಿಗದಿತ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ತಮ್ಮ ತಮ್ಮ ಕಚೇರಿ ಗಳಿಗೆ ನಿಗದಿತ ಅವಧಿಗೆ ಕಚೇರಿಗೆ ಹಾಜರಾಗಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿ ಆದೇಶ ನೀಡಿದ್ದಾರೆ.ಬೆಳಗ್ಗೆ ಹತ್ತು ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಕಚೇರಿ ಅವಧಿ ಪೂರ್ಣವಾಗುವರೆಗೆ ‌ನಿಗದಿತ ಸ್ಥಾನದ ಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು.

ಕಚೇರಿ ಅವಧಿಯಲ್ಲಿ ಅನ್ಯ ಕೆಲಸದ ಮೇಲೆ ತೆರಳಿದರೆ ಕಾರಣ ನಮೂದಿಸಿ ಮೇಲಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು. ವಿಳಂಬ ಹಾಜರಾತಿ ಕಚೇರಿ ಅವಧಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದ,ಮೇಲಧಿಕಾರಿಗಳ ಅನುಮತಿ ಪಡೆದಿ ಲ್ಲದ ನೌಕರರ ವಿರುದ್ಧ ಸಕ್ಷಮ‌ ಪ್ರಾಧಿಕಾರದಿಂದ ಶಿಸ್ತು ಕ್ರಮ ಕೈಗೊಳ್ಳು ವಂತೆ ಮುಖ್ಯ ಕಾರ್ಯದರ್ಶಿ ಆದೇಶಿ ಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.