ಧಾರವಾಡ ದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಪ್ರತಿಭಟನೆ ಮಾಜಿ CM ಮೇಲೆ ಮೊಟ್ಟೆ ಎಸೆದಿದ್ದಕ್ಕೆ ಸಿಡಿದೆದ್ದ ಕಾಂಗ್ರೆಸ್ ಪಕ್ಷದವರು…..

Suddi Sante Desk

ಧಾರವಾಡ –

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡಗಿನ ಪ್ರವಾಸದಲ್ಲಿ ಅವರ ಮೇಲೆ ಮೊಟ್ಟೆ ಎಸೆತವನ್ನು ಮಾಡಿದ ಕ್ಕಾಗಿ ಈ ಒಂದು ಘಟನೆ ಯನ್ನು ಹುಬ್ಬಳ್ಳಿ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

ಹೌದು ನಿನ್ನೆ ಕೊಡಗಿ ನಲ್ಲಿ ನಡೆದ ಈ ಒಂದು ಘಟನೆ ಯನ್ನು ಧಾರವಾಡದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಖಂಡಿಸಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ಮಾಡಲಾ ಯಿತು ನಗರದಲ್ಲಿ ಈ ಒಂದು ಪ್ರತಿಭಟನೆ ಯನ್ನು ಪಕ್ಷದ ಮುಖಂಡರು ಕಾರ್ಯಕರ್ತರು ಮಾಡಿದರು

ಹುಬ್ಬಳ್ಳಿ ಧಾರವಾಡ ದಲ್ಲಿ ಪ್ರತ್ಯೇಕವಾಗಿ ಈ ಒಂದು ಪ್ರತಿಭಟನೆ ಯನ್ನು ರಾಜ್ಯ ಸರ್ಕಾರದ ವಿರುದ್ಧ ಮಾಡಲಾ ಯಿತು.ಇನ್ನೂ ಧಾರವಾಡ ದಲ್ಲಿ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆಯನ್ನು ಮಾಡಲಾಯಿತು

ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು.ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯ ಕರ್ತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು ಘಟನೆ ಕುರಿತು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಈ ಒಂದು ಹೋರಾಟದಲ್ಲಿ ಅವಳಿ ನಗರದ ಪಕ್ಷದ ಮುಖಂಡರು ಕಾರ್ಯಕರ್ತರು ಆಪ್ತರು ಸೇರಿದಂತೆ ಹಲವರು ಪಾಲ್ಗೊಂಡು ಮೊಟ್ಟೆ ಎಸೆದ ಪ್ರಕರಣ ವನ್ನು ಖಂಡಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.