ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಶೀಘ್ರದಲ್ಲೇ ಬಿಸಿಯೂಟ ದಲ್ಲಿ ಸಿಗಲಿದೆ ಇವೆರಡು ಆಹಾರ ಪದಾರ್ಥಗಳು

Suddi Sante Desk

ಬೆಂಗಳೂರು –

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು ಮಧ್ಯಾಹ್ನದ ಬಿಸಿಯೂಟದಲ್ಲಿ ರಾಗಿ ಮುದ್ದೆ ಮತ್ತು ಜೋಳದ ರೊಟ್ಟಿ ನೀಡಲು ಅನುಮತಿ ಕೋರಿ ರಾಜ್ಯ ಶಿಕ್ಷಣ ಇಲಾಖೆಯು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಲಕ್ಷಾಂತರ ಮೆಟ್ರಿಕ್ ಟನ್ ಜೋಳ ಮತ್ತು ರಾಗಿ ಉಗ್ರಾಣ ಗಳನ್ನು ಬಳಸಿಕೊಂಡು ಮಕ್ಕಳಿಗೆ ಬಿಸಿಯೂಟದಲ್ಲಿ ರಾಗಿ ಮುದ್ದೆ ಮತ್ತು ಜೋಳದ ರೊಟ್ಟಿ ನೀಡಲು ಕ್ರಮ ವಹಿಸು ವಂತೆ ಕೋರಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.

ಬಿಸಿಯೂಟ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳೆರಡೂ ನಿರ್ದಿಷ್ಟ ಅನುಪಾತದಲ್ಲಿ ಅನುದಾನ ಒದಗಿಸು ತ್ತಿರುವುದರಿಂದ ಈ ಬಗ್ಗೆ ಕೇಂದ್ರದ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಕೇಳಿದೆ.ಒಂದು ವೇಳೆ ಕೇಂದ್ರ ಸರ್ಕಾರ ಒಪ್ಪಿದರೆ ಬಿಸಿಯೂಟದಲ್ಲಿ ರಾಗಿ ಮುದ್ದೆ,ಜೋಳದ ರೊಟ್ಟಿ ನೀಡುವ ಪ್ರಸ್ತಾವನೆಗೆ ಸಮ್ಮತಿ ಸೂಚಿಸಲು ನಿರ್ಧರಿಸಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.