ಬಿಸಿಯೂಟ ನೌಕರರಿಗೆ ನರೇಗ ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ – ಅಧಿಕೃತವಾಗಿ ಆದೇಶ ಮಾಡಿದ ರಾಜ್ಯ ಸರ್ಕಾರ

Suddi Sante Desk

ಬೆಂಗಳೂರು –

ಶಾಲೆಗಳಲ್ಲಿ_ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಅಡುಗೆ ಸಿಬ್ಬಂದಿಯು ಸರ್ಕಾರದ ಪೂರ್ಣಕಾಲಿಕ ನೌಕರರಾಗುವುದಿಲ್ಲ ಅವರು ಗಳು ನಿಗದಿತ ಗೌರವಧನ ಪಡೆದು ಪ್ರತಿ ದಿನ 4 ಗಂಟೆಗಳ ಅವಧಿಗೆ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಾರೆ. ಆದ್ದರಿಂದ ಈ ಅಡುಗೆ ಸಿಬ್ಬಂದಿಯ ವಾಸಸ್ಥಳವನ್ನು ಪರಿಶೀಲಿಸಿ ಮಹಾತ್ಮಗಾಂಧಿ ನರೇಗಾ ಅಧಿನಿಯಮದ ನ್ವಯ ಜಾಬ್ ಕಾರ್ಡ್ ನೀಡಲು ಮತ್ತು ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಒದಗಿಸಲು ಅಗತ್ಯ ಕ್ರಮವಹಿಸು ವಂತೆ ಆದೇಶಿಸಲಾಗಿದೆ.

ಇತ್ತೀಚಿಗಷ್ಟೇ ಹೈಕೊರ್ಟ್ ಇವರಿಗೆ ಬೇಡಿಕೆಗಳ ವಿಚಾರ ದಲ್ಲಿ ಶಾಕ್ ನೀಡಿತ್ತು ಇತ್ತ ಹೋರಾಟಕ್ಕೂ ಕೂಡಾ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸಿರಲಿಲ್ಲ ಇವೆಲ್ಲದರ ನಡುವೆ ಈಗ ರಾಜ್ಯ ಸರ್ಕಾರ ಇವರಿಗೂ ಕೂಡಾ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಡಿ ಜಾಬ್ ಕಾರ್ಡ್ ನೀಡಲು ಸೂಚನೆ ನೀಡಿ ಆದೇಶವನ್ನು ಮಾಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.