10 ಶಿಕ್ಷಕರ ಅಮಾನತು ಅಮಾನತು ಮಾಡಿ ಆದೇಶ ಹೊರಡಿಸಿದ DDPI…..

Suddi Sante Desk

ತುಮಕೂರು –

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನೇಮ ಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಜಿಲ್ಲೆಯ 10 ಸರ್ಕಾರಿ ಪ್ರೌಢಶಾಲಾ ಶಿಕ್ಷಕರನ್ನು ಅಮಾನತು ಗೊಳಿಸಲಾಗಿದೆ.ಅಕ್ರಮ ಮಾರ್ಗಗಳ ಮೂಲಕಉದ್ಯೋಗ ಪಡೆದ ಆರೋಪದ ಮೇಲೆ ಸಿಐಡಿ ಪೊಲೀಸರು ಸೆಪ್ಟೆಂ ಬರ್ 6 ರಂದು ಶಿಕ್ಷಕರನ್ನು ಬಂಧಿಸಿದ್ದರು.ಡಿಡಿಪಿಐ ಸಿ. ನಂಜಯ್ಯ ಅವರು ಬಂಧನದ ದಿನಾಂಕಕ್ಕೆ ಅನ್ವಯವಾಗು ವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

2012-14ರ ನಡುವೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಕಳೆದ ತಿಂಗಳು ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಿ ಕಳಂಕಿತ ಶಿಕ್ಷಕರು ಕೆಲಸ ಮಾಡುತ್ತಿದ್ದ ಶಾಲೆಗಳಿಗೆ ಭೇಟಿ ನೀಡಿ ಅವರನ್ನು ಬಂಧಿಸಿದ್ದರು.ಹೆಚ್ಚಿನ ವಿಚಾರಣೆ ಗಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ ನಂತರ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂ ಡರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.