ಅಕ್ಟೋಬರ್ ನಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿಯ 7ನೇ ವೇತನ ಸಮಿತಿ ರಚನೆ – ಘೋಷಣೆ ಮಾಡಿದರು ಮುಖ್ಯಮಂತ್ರಿ…..

Suddi Sante Desk

ಬೆಂಗಳೂರು –

ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯ 7ನೇ ವೇತನ ನೀಡುವ ವಿಚಾರ ಕುರಿತು ಬರುವ ಅಕ್ಟೋಬರ್ ನಲ್ಲಿ ಸಮಿತಿ ಯೊಂದನ್ನು ರಚನೆ ಮಾಡೊದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಒಂದು ವಿಚಾರ ಕುರಿತು ಘೋಷಣೆ ಮಾಡಿದರು

ರಾಜ್ಯದ ಸರ್ಕಾರಿ ನೌಕರರ ಕಾರ್ಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಅವರು ನೀವೆಲ್ಲರೂ ನಮ್ಮ ಕುಟುಂಬದ ಸದಸ್ಯರು ಹೀಗಾಗಿ ನಿಮ್ಮ ರಕ್ಷಣೆ ನಮ್ಮ ಜವಾಬ್ದಾರಿ ಎನ್ನುತ್ತಾ ಈ ಒಂದು ಘೋಷಣೆ ಯನ್ನು ಮಾಡಿದರು

ಬೆಂಗಳೂರಿನ ಬಾಂಕ್ವೇಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಸರ್ವೋತ್ತಮ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು ಕೊನೆಗೂ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ನೆಮ್ಮದಿಯ ಗುಡ್ ನ್ಯೂಸ್ ನೀಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.